ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ರ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್ - Mahanayaka
6:50 AM Wednesday 15 - October 2025

ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ರ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್

05/11/2024

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ವಾರ ಪೊಲೀಸ್ ಠಾಣೆಯಲ್ಲಿ ವರದಿ ಮಾಡಬೇಕಾಗುತ್ತದೆ. ದಲಿತ ಹುಡುಗಿಯ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವರದಿ ಮಾಡಲು ಹತ್ರಾಸ್ ಗೆ ಪ್ರಯಾಣಿಸುತ್ತಿದ್ದಾಗ 2020ರ ಅಕ್ಟೋಬರ್ ನಲ್ಲಿ ಕಪ್ಪನ್ ಅವರನ್ನು ಬಂಧಿಸಲಾಗಿತ್ತು. ಅಲ್ಲದೇ ಇತರರ ಜೊತೆಗೆ ಭಯೋತ್ಪಾದನೆ ಸಂಬಂಧಿತ ಅಪರಾಧಗಳ ಆರೋಪ ಹೊರಿಸಲಾಯಿತು.


Provided by

2022ರ ಸೆಪ್ಟೆಂಬರ್ ನಲ್ಲಿ ತನಗೆ ಜಾಮೀನು ಮಂಜೂರಾದಾಗ ಆರಂಭದಲ್ಲಿ ನಿಗದಿಪಡಿಸಿದ್ದ ತನ್ನ ಜಾಮೀನು ಷರತ್ತುಗಳಲ್ಲಿ ಮಾರ್ಪಾಡುಗಳನ್ನು ಕೋರಿ ಕಪ್ಪನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರು ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಿದ್ದಾರೆ. ಈ ಹಿಂದೆ ಆದೇಶಿಸಿದಂತೆ ಪ್ರತಿ ಸೋಮವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವರದಿ ಮಾಡುವ ಅಗತ್ಯವಿಲ್ಲದೇ, ಕೇರಳದ ತನ್ನ ತವರು ಪಟ್ಟಣವಾದ ಮಲ್ಲಪುರಂಗೆ ಹಿಂದಿರುಗುವ ಮೊದಲು ಆರು ವಾರಗಳ ಕಾಲ ದೆಹಲಿಯಲ್ಲಿ ಉಳಿಯಲು ನ್ಯಾಯಪೀಠವು ಕಪ್ಪನ್ ಗೆ ಅನುಮತಿ ನೀಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ