ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಲಾಠಿ ಏಟು: ಬಾಲಕನ ದಾರುಣ ಸಾವು - Mahanayaka

ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಲಾಠಿ ಏಟು: ಬಾಲಕನ ದಾರುಣ ಸಾವು

police
22/05/2021

ಲಕ್ನೋ: ಕೊವಿಡ್ ನಿಯಮ ಉಲ್ಲಂಘಿಸಿದ ಎಂದು ಇಬ್ಬರು ಪೊಲೀಸ್ ಸಿಬ್ಬಂದಿ ತರಕಾರಿ ಮಾರಾಟ ಮಾಡುತ್ತಿದ್ದ 17 ವರ್ಷ ವಯಸ್ಸಿನ ಬಾಲಕನನ್ನು ಥಳಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.

ಉನ್ನಾವೋದ ಬಂಗರ್ಮೌ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತನ್ನ ಮನೆಯ ಮುಂದೆ ತರಕಾರಿ ಮಾರಾಟ ಮಾಡುತ್ತಿದ್ದ ಬಾಲಕನನ್ನು  ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು, ಮನಬಂದಂತೆ ಥಳಿಸಿ ಚಿತ್ರ ಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ.

ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಳಿಕ ಬಾಲಕ ಅಸ್ವಸ್ಥನಾಗಿದ್ದು, ಈ ವೇಳೆ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಇಬ್ಬರು ಕಾನ್ ಸ್ಟೇಬಲ್ ಮತ್ತು ಓರ್ವ ಹೋಂ ಗಾರ್ಡ್ ನ್ನು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ನೀಡಲಾಗಿದೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ಇತ್ತೀಚಿನ ಸುದ್ದಿ