ಕೊವಿಡ್ ಸೋಂಕು ಮತ್ತೆ ಉಲ್ಬಣ: ಹೊಸ ಮಾರ್ಗಸೂಚಿ ಬಿಡುಗಡೆ - Mahanayaka
9:23 PM Friday 11 - September 2026

ಕೊವಿಡ್ ಸೋಂಕು ಮತ್ತೆ ಉಲ್ಬಣ: ಹೊಸ ಮಾರ್ಗಸೂಚಿ ಬಿಡುಗಡೆ

covid case
28/11/2021

ಬೆಂಗಳೂರು: ಧಾರವಾಡ, ಬೆಂಗಳೂರು ಹಾಗೂ ಮೈಸೂರು ಕಾಲೇಜುಗಳಲ್ಲಿ  ಕೊವಿಡ್ ಸೋಂಕು ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೊವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇರಳ, ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ RTPCR ಟೆಸ್ಟ್ ಮಾಡಿಸಬೇಕು. ಕಳೆದ 72 ಗಂಟೆ ಒಳಗಿನ RTPCR ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಿಗೆ  ಪುನಃ ಟೆಸ್ಟ್ ಮಾಡಿಸಬೇಕು, ಕೇರಳದಿಂದ ಬರುತ್ತಿರುವವರನ್ನು ಪತ್ತೆ ಹಚ್ಚಿ ಟೆಸ್ಟಿಂಗ್ ಮಾಡಬೇಕು ಎಂದು ತಿಳಿಸಲಾಗಿದೆ.

RTPCR ಟೆಸ್ಟ್ ಪಾಸಿಟಿವ್ ಇದ್ದರೆ, ಪ್ರೋಟೋಕಾಲ್ ಅನ್ವಯ . RTPCR ಟೆಸ್ಟ್ ನೆಗೆಟಿವ್ ಬಂದರೂ ಕ್ವಾರಂಟೈನ್ ಆಗಬೇಕು. ಮತ್ತೆ 7 ದಿನಗಳ ಬಳಿಕ RTPCR ಟೆಸ್ಟ್ ಮಾಡಿಸಬೇಕು.  ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ಸ್ಕ್ರೀನಿಂಗ್ ಟೆಸ್ಟ್ ಮೇಲೆ ನಿಗಾ ಇಡಬೇಕು ಎಂದು ಸೂಚಿಸಲಾಗಿದೆ.

ಹೊರ ರಾಜ್ಯಗಳಿಂದ ಯಾರೇ ಬಂದರೂ RTPCR ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು, ಪ್ರಯಾಣಿಕರು, ಉದ್ಯಮಿಗಳಿಗೆ ಟೆಸ್ಟ್ ಕಡ್ಡಾಯವಾಗಿದೆ. ಇದಲ್ಲದೇ ರಾಜ್ಯಕ್ಕೆ ಪ್ರವೇಶಿಸಲು ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋದ ಬಂಡುಕೋರ | ರಮೇಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪಂಚ್

ಮುಂದಿನ ಸರಿಗಮಪ ವೇದಿಕೆಯಲ್ಲಿ ಹಂಸಲೇಖ ಇಲ್ಲದಿದ್ದರೆ, ‘ಝೀ ಕನ್ನಡ’ಕ್ಕೆ ಆಗಲಿದೆ ಭಾರೀ ನಷ್ಟ!

ABCD ಗೊತ್ತಿಲ್ಲದ ಇಬ್ಬರು ಇಂಗ್ಲಿಷ್ ಶಿಕ್ಷಕರ ಅಮಾನತು

ಶಿಕ್ಷಣ, ಆರೋಗ್ಯ, ಉದ್ಯೋಗದ ಹಕ್ಕಿಗಾಗಿ ಪ್ರಬಲ ಜನಚಳುವಳಿ ಕಟ್ಟಲು ಸಿಪಿಐ(ಎಂ) ಜಿಲ್ಲಾ ಸಮ್ಮೇಳನ ನಿರ್ಧಾರ

ರಂಗಭೂಮಿಯನ್ನೂ ಬೆನ್ನತ್ತಿದ ಕೋಮುವಾದದ ಸರಕು

ತಮ್ಮ ನೇಣು ಬಿಗಿದುಕೊಂಡಿದ್ದ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಕ್ಕಾ!

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler