ಅನುಮಾನಗೊಂಡು ದ್ವಿಚಕ್ರ ವಾಹನ ನಿಲ್ಲಿಸಿದ ಪೊಲೀಸರು | ಅದರಲ್ಲಿದ್ದ ಚಿನ್ನಾಭರಣ ಎಷ್ಟು ಗೊತ್ತಾ? - Mahanayaka

ಅನುಮಾನಗೊಂಡು ದ್ವಿಚಕ್ರ ವಾಹನ ನಿಲ್ಲಿಸಿದ ಪೊಲೀಸರು | ಅದರಲ್ಲಿದ್ದ ಚಿನ್ನಾಭರಣ ಎಷ್ಟು ಗೊತ್ತಾ?

21/11/2020

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ನಗರ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದಲಪತ್ ಸಿಂಗ್ ಹಾಗೂ ವಿಕಾಶ್ ಬಂಧಿತ ಆರೋಪಿಗಳಾಗಿದ್ದಾರೆ. ನಿನ್ನೆ ರಾತ್ರಿ ದೊಡ್ಡಪೇಟೆ ಸರ್ಕಲ್ ಬಳಿ ಗಸ್ತಿನಲ್ಲಿದ್ದ ಕಾನ್​ಸ್ಟೇಬಲ್​ಗಳಾದ ಹನುಮಂತ ಹಾಗೂ ಆನಂದ್ ಎಂಬವರು ಇವರಿಬ್ಬರನ್ನು ತಡೆದು ನಿಲ್ಲಿಸಿ ಪ್ರಶ್ನಿಸಿದಾಗ ಉತ್ತರಿಸಲು ತಡಾಬಡಾಯಿಸಿದ್ದಾರೆ. ಈ ವೇಳೆ ಅನುಮಾನಗೊಂಡು ಅವರು ಪರಿಶೀಲಿಸಿದಾಗ ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಆರೋಪಿಗಳ ಬಳಿಯಲ್ಲಿ ಚಿನ್ನಾಭರಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿರಲಿಲ್ಲ. ಆದರೆ, “ನರ್ಗತಪೇಟೆಯಲ್ಲಿರುವ ಎಸ್.ಎಸ್.ಜ್ಯೂವೆಲ್ಲರಿ ಶಾಪ್​ ಗೆ ಚಿನ್ನ ಸಾಗಣೆ ಮಾಡುತ್ತಿದ್ದೆವು” ಎಂದು ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ