12:40 PM Tuesday 24 - February 2026

ದಕ್ಷಿಣ ಕನ್ನಡ: ಮುಳುಗು ಸೇತುವೆಯಲ್ಲಿ ಸಿಲುಕಿದ ಪಿಕಪ್ ವಾಹನ

padil kedila
24/07/2023

ಮುಳುಗು ಸೇತುವೆಯೊಂದರಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿ ಹಾಕಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ಕೆದಿಲ ಗ್ರಾಮದ ಕಾಂತುಕೋಡಿಯಲ್ಲಿ ನಡೆದಿದೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂತುಕೋಡಿ -ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಸಂಪೂರ್ಣ ಮುಳುಗಡೆಯಾಗಿದೆ. ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು‌ ಚಲಾಯಿಸಿಕೊಂಡು ಬಂದಿದ್ದು ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದ್ದಾರೆ.

ಕೂಡಲೇ ಎಚ್ಚೆತ್ತ ಸ್ಥಳೀಯರು ವಾಹನದಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಪಿಕಪ್ ವಾಹನವು ಪಡೀಲು ಭಾಗದಿಂದ ಕೆದಿಲ ಭಾಗಕ್ಕೆ ತೆರಳುತ್ತಿತ್ತು. ಸೇತುವೆ ಮಳೆಗಾಲದಲ್ಲಿ ನಿತ್ಯ ನಿರಂತರವಾಗಿ ಮುಳುಗಡೆಯಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version