ದೆಹಲಿ ಗಲಭೆ: ನ್ಯಾಯಾಲಯದಿಂದ ಉಮರ್ ಖಾಲಿದ್‍ ಗೆ ಜಾಮೀನು ನಿರಾಕರಣೆ - Mahanayaka
10:45 AM Saturday 24 - January 2026

ದೆಹಲಿ ಗಲಭೆ: ನ್ಯಾಯಾಲಯದಿಂದ ಉಮರ್ ಖಾಲಿದ್‍ ಗೆ ಜಾಮೀನು ನಿರಾಕರಣೆ

ummar
24/03/2022

ನವದೆಹಲಿ: 2020ರಲ್ಲಿ ನಡೆದಿದ್ದ ದೆಹಲಿ ಗಲಭೆಗೆ ಪ್ರಕರಣದ ಆರೋಪಿಯಾಗಿರುವ ಜೈಲಿನಲ್ಲಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‍ಗೆ ದೆಹಲಿ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.

ಹೆಚ್ಚುವರಿ ಸೆಷನ್ಸ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಮಾ.3ರಂದು ಆದೇಶವನ್ನು ಕಾಯ್ದಿರಿಸಿದ್ದರು.

ಫೆ. 2020ರಲ್ಲಿ ನಡೆದಿದ್ದ ದಿಲ್ಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಲಭೆಯಲ್ಲಿ 53 ಮಂದಿ ಬಲಿಯಾಗಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. , 2020ರ ಸೆ. 14, 2020 ಉಮರ್ ಖಾಲಿದ್‌ನನ್ನು ಬಂಧಿಸಲಾಗಿತ್ತು.

ವಾದದ ಸಮಯದಲ್ಲಿ, ಆರೋಪಿಯು ತನ್ನ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಕರಣದ ವಿಚಾರಣೆ ಮಾ.3 ರಂದು ಮುಕ್ತಾಯಗೊಂಡಿತ್ತು ಮತ್ತು ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎರಡು ವರ್ಷದ ಮಗುವಿನ ಮೇಲೆ ದೊಡ್ಡಪ್ಪನಿಂದಲೇ ಅತ್ಯಾಚಾರ: ಆರೋಪಿಯ ಬಂಧನ

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ

ಪುಟಿನ್ ಪ್ರಮುಖ ಸಲಹೆಗಾರ ಅನಾಟೊಲಿ ಚುಬೈಸ್ ರಾಜೀನಾಮೆ

ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ: ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ