ಪೆಟ್ರೋಲ್ ಪಂಪ್ ಸಿಬ್ಬಂದಿ ಮೇಲೆ ದೈಹಿಕ ಹಲ್ಲೆ ನಡೆಸಿದ ಎಎಪಿ ಶಾಸಕರ ಪುತ್ರ: ಕೇಸ್ ಫೈಲ್
ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರ ಮಗ ನೋಯ್ಡಾ ಸೆಕ್ಟರ್ -95 ರ ಪೆಟ್ರೋಲ್ ಪಂಪ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದಿದ್ದಾನೆ.
ಪೆಟ್ರೋಲ್ ಪಂಪ್ ನಲ್ಲಿ ಉದ್ಯೋಗಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಎಪಿ ದೆಹಲಿ ಶಾಸಕ ಅಮಾನತುಲ್ಲಾ ಖಾನ್ ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಡಿಸಿಪಿ ಮನೀಶ್ ಮಿಶ್ರಾ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ (ಎಎಪಿ) ದೆಹಲಿ ಶಾಸಕ ಅಮನತುಲ್ಲಾ ಖಾನ್ ಅವರ ಮಗ ಪೆಟ್ರೋಲ್ ಪಂಪ್ ನಲ್ಲಿ ನೌಕರರನ್ನು ಥಳಿಸಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ಪ್ರಕರಣ ದಾಖಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಸಿಪಿ ಮನೀಶ್ ಮಿಶ್ರಾ ತಿಳಿಸಿದ್ದಾರೆ.
ಶಾಸಕರ ಮಗ ಪೆಟ್ರೋಲ್ ಹಾಕಲು ಸರದಿಯನ್ನು ಮುರಿಯಲು ಪ್ರಯತ್ನಿಸಿದ್ದರು. ಆಗ ಪೆಟ್ರೋಲ್ ಪಂಪ್ ನ ಸಿಬ್ಬಂದಿ ಇದಕ್ಕೆ ನಿರಾಕರಿಸಿದ್ದರು.
ತನ್ನನ್ನು ‘ಕೆಟ್ಟ ವ್ಯಕ್ತಿ’ ಎಂದು ಘೋಷಿಸಿದ ದೆಹಲಿ ಪೊಲೀಸರು ತನ್ನ ವಿರುದ್ಧ ಹಿಸ್ಟರಿ ಶೀಟ್ ತೆರೆಯುವುದನ್ನು ಪ್ರಶ್ನಿಸಿ ಅಮನತುಲ್ಲಾ ಖಾನ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹಿಸ್ಟರಿ ಶೀಟ್ ಕೇವಲ ಆಂತರಿಕ ಪೊಲೀಸ್ ದಾಖಲೆಯಾಗಿದೆ ಮತ್ತು ಅದನ್ನು ಸಾರ್ವಜನಿಕ ಡೊಮೇನ್ಗೆ ತರಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth