ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕನ ವಜಾಕ್ಕೆ ದೆಹಲಿ ಕಾಂಗ್ರೆಸ್ ಮುಖ್ಯಸ್ಥರ ಆಗ್ರಹ - Mahanayaka
1:12 PM Wednesday 17 - December 2025

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕನ ವಜಾಕ್ಕೆ ದೆಹಲಿ ಕಾಂಗ್ರೆಸ್ ಮುಖ್ಯಸ್ಥರ ಆಗ್ರಹ

19/09/2024

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಕೇಂದ್ರ ಸಚಿವ ರವ್ನೀತ್ ಸಿಂಗ್ ಬಿಟ್ಟು ಅವರು “ನಂಬರ್ ಒನ್ ಭಯೋತ್ಪಾದಕ” ಎಂಬ ವಿವಾದಾತ್ಮಕ ಹೇಳಿಕೆ‌ ನೀಡಿದ ಕೆಲವು ದಿನಗಳ ನಂತರ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್ ಅವರು ಬಿಜೆಪಿ ನಾಯಕನನ್ನು ತಕ್ಷಣವೇ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಬಿಟ್ಟು ವಿರುದ್ಧ ಔಪಚಾರಿಕ ಪೊಲೀಸ್ ದೂರು ದಾಖಲಿಸಿದ ಯಾದವ್, ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ನಾಯಕರನ್ನು ಉಚ್ಚಾಟಿಸುವಂತೆ ಒತ್ತಾಯಿಸಿದ್ದಾರೆ.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರು ಕೇಂದ್ರ ಗೃಹ ಸಚಿವಾಲಯಕ್ಕೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ
ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಗಾಂಧಿಯವರ ‘ಶೌರ್ಯ’ ವನ್ನು ಒತ್ತಿಹೇಳಿದರು.

ಯಾದವ್ ಅವರ ಪ್ರಕಾರ, ರಾಹುಲ್ ಗಾಂಧಿಯವರ ಹೆಚ್ಚುತ್ತಿರುವ ಬೆಂಬಲ ಮತ್ತು ಲಕ್ಷಾಂತರ ಭಾರತೀಯರ ಬಲವಾದ ಬೆಂಬಲವನ್ನು ಗಳಿಸಿರುವ ಸಂವಿಧಾನವನ್ನು ರಕ್ಷಿಸುವ ಅವರ ಬದ್ಧತೆಗೆ ಬಿಜೆಪಿ ಹೆದರುತ್ತಿದೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ರಾಯ್ ಬರೇಲಿ ಸಂಸದರೊಂದಿಗೆ ದೃಢವಾಗಿ ನಿಲ್ಲುತ್ತಾರೆ. ಯಾವುದೇ ಬೆದರಿಕೆಗಳ ವಿರುದ್ಧ ಅವರನ್ನು ರಕ್ಷಿಸಲು ಸಿದ್ಧರಿದ್ದಾರೆ ಎಂದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ