ಮಂಗಳೂರು ಬಾಂಬ್ ಸ್ಫೋಟದಿಂದ ದೇವರೇ ನಮ್ಮನ್ನು ಕಾಪಾಡಿದ್ದು: ಯು.ಟಿ.ಖಾದರ್ - Mahanayaka
10:00 PM Tuesday 16 - September 2025

ಮಂಗಳೂರು ಬಾಂಬ್ ಸ್ಫೋಟದಿಂದ ದೇವರೇ ನಮ್ಮನ್ನು ಕಾಪಾಡಿದ್ದು: ಯು.ಟಿ.ಖಾದರ್

u t khadar
28/12/2022

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ  ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯ್ತು.


Provided by

ಈ ವೇಳೆ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇನ್ನೊಬ್ಬರಿಗೆ ಅನ್ಯಾಯ ಮಾಡಬೇಕು ಎಂದು ಬರೆದಿಲ್ಲ. ತಾನು ವಾಸಿಸುವ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಬರೆಯಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

ಭಯೋತ್ಪಾದಕರು, ಅಪರಾಧಿಗಳು, ಕ್ರೈಮ್ ಮಾಡುವವರು ಎಲ್ಲ ಸಮುದಾಯದಲ್ಲಿಯೂ ಇದ್ದಾರೆ. ಅವರನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ದೊಡ್ಡ ತಪ್ಪು ಎಂದು ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಗೆ ಬಂದಾತ ದೇವರ ದಯದಲ್ಲಿ ರಿಕ್ಷಾದಲ್ಲಿಯೇ ಬಾಂಬ್ ಸ್ಫೋಟವಾದ ಕಾರಣ ಸಿಕ್ಕಿ ಬಿದ್ದ ಎಂದು ಯು.ಟಿ.ಖಾದರ್ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ