6:49 AM Thursday 23 - October 2025

ಧರ್ಮಸ್ಥಳ: ಎರಡನೇ ಸಾಕ್ಷಿ ದೂರುದಾರನಿಗೆ ಜೀವ ಬೆದರಿಕೆ: 17 ಮಂದಿಯ ವಿರುದ್ಧ ದೂರು

jayant t
12/08/2025

ಬೆಳ್ತಂಗಡಿ: ಯುವತಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಎಸ್ ಐಟಿಗೆ ಮಾಹಿತಿ ನೀಡಿರುವ 2ನೇ ಸಾಕ್ಷಿ ದೂರುದಾರನಿಗೆ ಬೆದರಿಕೆ ಹಾಕಿರುವ ಸಂಬಂಧ 17 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ.

ಎರಡನೇ ದೂರುದಾರ ಜಯಂತ್ ಟಿ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನನ್ನು ಕೆಲವರು ಹಿಂಬಾಲಿಸಿಕೊಂಡು ಬಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸುಮಾರು 17 ಮಂದಿಯ ವಿರುದ್ಧ ಅವರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಸ್‌ ಐಟಿಗೆ ದೂರು ನೀಡಿದ ದಿನದಿಂದ ತನ್ನ ಮೇಲೆ ಹಲ್ಲೆ ಮಾಡಲು ಮಾಧ್ಯಮಗಳ ಮೂಲಕ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಸಂತ್ ಗಿಳಿಯಾರು, ಕಿರಿಕ್ ಕೀರ್ತಿ, ವಿಕಾಸ್ ಶಾಸ್ತ್ರಿ ಮತ್ತು ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಎಂಬವರನ್ನು ದೂರಿನಲ್ಲಿ ಉಲ್ಲೇಖಿಸಿರುವ ಜಯಂತ್ ಟಿ., ತಂಡವೊಂದು ತನ್ನನ್ನು ಹಿಂಬಾಲಿಸಿಕೊಂಡು ಬಂದು ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version