ಸಕ್ಕರೆ ಕಾಯಿಲೆ ಇದ್ದವರು ಈ ಹಣ್ಣನ್ನು ತಪ್ಪದೇ ಸೇವಿಸಿ
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಂದರೆ ಮನುಷ್ಯನಿಗೆ ಒಂದಲ್ಲ ಒಂದು ಸಂಕಷ್ಟಗಳು ಕಾಡುತ್ತಲೇ ಇರುತ್ತವೆ. ರಕ್ತದಲ್ಲಿ ಸಕ್ಕರೆಯ ಅಂಶ ಏರುಪೇರಾಗಿ ನಾನಾ ರೀತಿಯ ಸಮಸ್ಯೆಗಳಿಗೆ ಮಧುಮೇಹಿಗಳು ಕಾರಣರಾಗುತ್ತಾರೆ. ಆದರೆ, ಮಧುಮೇಹಿಗಳಿಗೆ ಮಿತ್ರನಂತೆ ಕೆಲಸ ಮಾಡುವ ಒಂದು ಹಣ್ಣಿದೆ. ಈ ಹಣ್ಣನ್ನು ಸೇವಿಸಿದರೆ, ಮಧುಮೇಹಿಗಳು ಸ್ವಲ್ಪ ನಿರಾಳವಾಗಿರಬಹುದಂತೆ.
ಹೌದು..! ನೇರಳೆ ಹಣ್ಣನ್ನು ಸೇವಿಸಿದರೆ, ಮಾನವನ ರಕ್ತದಲ್ಲಿರುವ ಸಕ್ಕರೆಯ ಅಂಶ ನಿಯಂತ್ರಣದಲ್ಲಿರುತ್ತದೆಯಂತೆ! ನೇರಳೆ ಹಣ್ಣನ್ನು ಸೇವಿಸುವ ಮೂಲಕ ಮಧುಮೇಹಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಬಹುದಾಗಿದೆ.
ಇನ್ನೂ ನೇರಳೆ ಹಣ್ಣನ್ನು ಬೇಕಾಬಿಟ್ಟಿ ಸೇವಿಸಬಹುದೇ ಎಂದು ಪ್ರಶ್ನೆಗಳು ಬಂದರೆ, ನೇರಳೆ ಹಣ್ಣನ್ನು ನೀವು ಯಾವುದೇ ಸಮಯದಲ್ಲಿ ಸೇವಿಸ ಬಹುದು ಎನ್ನುವ ಉತ್ತರಗಳೇ ದೊರಕುತ್ತಿವೆ. ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುವ ಶಕ್ತಿ ನೇರಳೆ ಹಣ್ಣಿಗಿರುವುದರಿಂದ ಈ ಬಗ್ಗೆ ಭಯಬೇಡ ಎಂದೇ ಹೇಳಲಾಗುತ್ತಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.