ದೀಪಾವಳಿ ಹಬ್ಬದಂದು ಪತ್ನಿಯನ್ನು ಕೊಂದು ಬೆಂಕಿ ಹಚ್ಚಿದ ಪತಿ - Mahanayaka

ದೀಪಾವಳಿ ಹಬ್ಬದಂದು ಪತ್ನಿಯನ್ನು ಕೊಂದು ಬೆಂಕಿ ಹಚ್ಚಿದ ಪತಿ

15/11/2020

ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ.

ಟಿ.ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಪತ್ನಿ ಶಾಂತಮ್ಮ(22) ಹತ್ಯೆಯಾದ ಮಹಿಳೆಯಾಗಿದ್ದಾಳೆ. ಗ್ರಾಮ ಪಂಚಾಯತ್ ಚುನಾವಣೆಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಆರೋಪಿಯು ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿರುವ ಬನ್ನೂರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ