ದೀಪಾವಳಿ ಹಬ್ಬದಂದು ಪತ್ನಿಯನ್ನು ಕೊಂದು ಬೆಂಕಿ ಹಚ್ಚಿದ ಪತಿ - Mahanayaka

ದೀಪಾವಳಿ ಹಬ್ಬದಂದು ಪತ್ನಿಯನ್ನು ಕೊಂದು ಬೆಂಕಿ ಹಚ್ಚಿದ ಪತಿ

15/11/2020

ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ.


Provided by

ಟಿ.ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಪತ್ನಿ ಶಾಂತಮ್ಮ(22) ಹತ್ಯೆಯಾದ ಮಹಿಳೆಯಾಗಿದ್ದಾಳೆ. ಗ್ರಾಮ ಪಂಚಾಯತ್ ಚುನಾವಣೆಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಆರೋಪಿಯು ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿರುವ ಬನ್ನೂರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ