ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ಡಾ ಕೃಷ್ಣಪ್ರಸಾದ್ ಕೂಡ್ಲು ಅಧಿಕಾರ ಸ್ವೀಕಾರ - Mahanayaka
12:13 AM Wednesday 19 - March 2025

ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ಡಾ ಕೃಷ್ಣಪ್ರಸಾದ್ ಕೂಡ್ಲು ಅಧಿಕಾರ ಸ್ವೀಕಾರ

krishna prasad
01/11/2023

ಉಡುಪಿ: ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ರವಿವಾರ ನಡೆದ 42ನೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಮ್ಮೇಳನದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆೆಶಾಲಿಟಿ ಕಣ್ಣಿನ ಆಸ್ಪತ್ರೆೆಯ ವೈದ್ಯಕೀಯ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನೇತ್ರ ತಜ್ಞ ಡಾ ಕೃಷ್ಣಪ್ರಸಾದ್ ಕೂಡ್ಲು ಅವರು ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ರವಿವಾರ ಅಧಿಕಾರ ಸ್ವೀಕರಿಸಿದರು.


Provided by

ಕಣ್ಣಿನ ತಜ್ಞರಾದ ಡಾ ಹೇಮಂತ್ ಮೂರ್ತಿಯವರು ಡಾ. ಕೃಷ್ಣಪ್ರಸಾದ್ ಅವರಿಗೆ ಅಧಿಕಾರ ಹಸ್ತಾಾಂತರಿಸಿ, ಡಾ. ಕೃಷ್ಣಪ್ರಸಾದ್ ಅವರು ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ಮಾಡುತ್ತಾ, ಜನಸಾಮಾನ್ಯರಿಗೆ ಅನುಕೂಲವಾಗುವ ಕಣ್ಣಿನ ಉಚಿತ ಶಿಬಿರಗಳನ್ನು ಆಯೋಜಿಸಿಕೊಂಡು ಬರ್ತುತಿದ್ದಾಾರೆ. ಅವರು ಈಗಾಗಲೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ವೈಜ್ಞಾನಿಕ ಸಮಿತಿ ಸಮಿತಿ ಅಧ್ಯಕ್ಷರಾಗಿ 2 ವರ್ಷಗಳ ಕಾಲ ಹಾಗೂ ಕಾರ್ಯದರ್ಶಿಯಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ಕಣ್ಣಿನ ತಜ್ಞರ ಸಂಘದ ಪ್ರಸ್ತುತ ಎಡಿಟರ್ ಪ್ರೊಸೀಡಿಂಗ್ ಆಗಿ ಹಾಗೂ ಕರ್ನಾಟಕ ರಾಜ್ಯ ಸರಕಾರದ ಯಶಸ್ವಿನಿ ಆರೋಗ್ಯ ಟ್ರಸ್ಟ್ನ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶುಭ ಹಾರೈಸಿದರು.

ಅಧಿಕಾರ ಸ್ವೀಕರಿಸಿದ ಡಾ ಕೃಷ್ಣಪ್ರಸಾದ್ ಮಾತನಾಡಿ, ರಾಜ್ಯಾದ್ಯಂತ ಎಲ್ಲ ಜಿಲ್ಲೆೆಗಳಲ್ಲಿರುವ ಕಣ್ಣಿನ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅವರ ಸಮಸ್ಯೆೆಗಳನ್ನು ಆಲಿಸಿ ಪರಿಹರಿಸುವ ಹಾಗೂ ಸರಕಾರದ ಎಲ್ಲ ಯೋಜನೆಗಳಲ್ಲಿ ಕಣ್ಣಿನ ತಜ್ಞರನ್ನು ತೊಡಗಿಸಿಕೊಳ್ಳುವ ಮಹತ್ವಾಕಾಂಕ್ಷೆೆಯನ್ನು ಹೊಂದಿದ್ದೇನೆ ಎಂದು ತಿಳಿಸಿದರು.
ಮುಖ್ಯ ಅತಿಥಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆೆ, ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಸದಸ್ಯರು ಉಪಸ್ಥಿತರಿದ್ದರು.


Provided by

ಇತ್ತೀಚಿನ ಸುದ್ದಿ