ಮನೆ ಮುಟ್ಟುಗೋಲು ಹಾಕಲು ಬಂದ ಪೊಲೀಸರು | ಪೊಲೀಸರು, ಅಧಿಕಾರಿಗಳ ಎದುರೇ ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?
ತಿರುವನಂತಪುರಂ: ಮನೆಯನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳು ಮತ್ತು ಪೊಲೀಸರು ಬಂದಾಗ ಅಸಹಾಯಕ ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೇರಳದ ತಿರುವನಂತಪುರಂನ ನಯತಿಂಕರ ಎಂಬಲ್ಲಿ ನಡೆದಿದೆ.
ಇಲ್ಲಿನ ನಯ್ಯಾಟಿಂಕಾರ ಪಾಂಗ್ ಮೂಲದ ರಾಜನ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ರಾಜನ್ ಅವರು ತಮ್ಮ ಪತ್ನಿಯ ಜೊತೆಗೆ ವಿವಾದಿತ ಜಮೀನಿನಲ್ಲಿ ಶೆಡ್ ಹಾಕಿಕೊಂಡು ವಾಸಿಸುತ್ತಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಹಾಗೂ ಪೊಲೀಸರು ಶೆಡ್ ಮುಟ್ಟುಗೋಲು ಹಾಕಲು ಬಂದಿದ್ದು, ಈ ವೇಳೆ ಏನು ಮಾಡಬೇಕು ಎಂದು ತೋಚದ ರಾಜನ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ಪರಿಣಾಮ ರಾಜನ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜನ್ ಬೆಂಕಿ ಹಚ್ಚಿಕೊಂಡ ಸಂದರ್ಭದಲ್ಲಿ ಅವರ ಪತ್ನಿ ಅಂಬಿಲಿ ಹಾಗೂ ಎಸ್ ಐ ಅನೀಲ್ ಕುಮಾರ್ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ಅವರಿಗೂ ಗಾಯವಾಗಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.