ದೂರುದಾರನ ಬಳಿ ಲಂಚಕ್ಕೆ ಬೇಡಿಕೆ | ಸರ್ಕಲ್ ಇನ್ಸ್‌ಪೆಕ್ಟರ್‌ ಅರೆಸ್ಟ್ - Mahanayaka

ದೂರುದಾರನ ಬಳಿ ಲಂಚಕ್ಕೆ ಬೇಡಿಕೆ | ಸರ್ಕಲ್ ಇನ್ಸ್‌ಪೆಕ್ಟರ್‌ ಅರೆಸ್ಟ್

21/11/2020

ಹೈದರಾಬಾದ್: ದೂರುದಾರರ ಬಳಿ ಭಾರೀ ಮೊತ್ತದ ಲಂಚಕ್ಕೆ ಬೇಡಿಕೆ ನೀಡಿದ ಆರೋಪದ ಮೇಲೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ ಜಗದೀಶ್ ಎಂಬಾತನನ್ನು ಬಂಧಿಸಲಾಗಿದೆ.


Provided by

ದೂರುದಾರರ ಬಳಿ ಇನ್ಸ್‌ಪೆಕ್ಟರ್ ಜಗದೀಶ್ ತನ್ನ ಸಹಚರ ಎಂ.ಸುಜಯ್ ಮೂಲಕ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಬಂಧನದ ನಂತರ ಜಗದೀಶ್ ಮತ್ತು ಸುಜಯ್ ಅವರನ್ನು ಕರೀಂನಗರ ವಿಶೇಷ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ವಿಚಾರಣೆ ನಡೆಯುತ್ತಿದೆ. ಇನ್ಸ್‌ಪೆಕ್ಟರ್ ಜಗದೀಶ್ ನ ಲಂಚಾವತಾರ ಒಂದೊಂದಾಗಿ ಬೆಳಕಿಗೆ ಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ