ಮಹಾರಾಷ್ಟ್ರ ಸಿಎಂ ಕದನ: ಬಿಜೆಪಿಗೆ ತಿರುಗೇಟು ನೀಡಲು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪ್ಲ್ಯಾನ್

26/11/2024

ಮಹಾರಾಷ್ಟ್ರದಲ್ಲಿ ಭರ್ಜರಿ ಬಹುಮತವನ್ನು ದಾಖಲಿಸಿದ ನಂತರ ಮಹಾಯುತಿ ಕೂಟವು ಮುಖ್ಯಮಂತ್ರಿಯ ಮುಖದ ಬಗ್ಗೆ ಇನ್ನೂ ಒಮ್ಮತಕ್ಕೆ ಬಂದಿಲ್ಲ. ಏಕನಾಥ್ ಶಿಂಧೆ ಅವರ ಶಿವಸೇನೆ ಅವರಿಗೆ ಸಿಎಂ ಆಗಿ ಮುಂದುವರಿಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿರುವುದರಿಂದ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ವಿಳಂಬವಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಲು ಶಿವಸೇನೆ ಬಿಹಾರ ಪಾಲಿಟಿಕ್ಸ್ ಅನುಸರಿಸಲು‌ ಮುಂದಾಗಿದೆ.

ಬಿಹಾರದಲ್ಲಿ, ಬಿಜೆಪಿಗೆ ಹೋಲಿಸಿದರೆ ಜೆಡಿಯು ಕಡಿಮೆ ಶಾಸಕರನ್ನು ಹೊಂದಿದ್ದರೂ ಬಿಜೆಪಿ ನಿತೀಶ್ ಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ಈಗ, ಶಿವಸೇನೆ ವಕ್ತಾರ ನರೇಶ್ ಮಾಸ್ಕೆ ಅವರು ಬಿಹಾರ ಮಾದರಿಯನ್ನು ಉಲ್ಲೇಖಿಸಿ ಶಿಂಧೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಪಾದಿಸಿದ್ದಾರೆ.

“ಬಿಹಾರದಲ್ಲಿ ಬಿಜೆಪಿ ಸಂಖ್ಯಾಬಲವನ್ನು ನೋಡದೆ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದಂತೆಯೇ ಶಿಂಧೆ ಮುಖ್ಯಮಂತ್ರಿಯಾಗಬೇಕು ಎಂದು ನಾವು ಭಾವಿಸುತ್ತೇವೆ. ಮಹಾಯುತಿಯ (ಮಹಾರಾಷ್ಟ್ರದಲ್ಲಿ) ಹಿರಿಯ ನಾಯಕರು ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಮಾಸ್ಕೆ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version