ವಿದ್ಯುತ್ ದರ ಏರಿಕೆ: ಕಾಂಗ್ರೆಸ್ ತಂದ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ: ಸಚಿವ ಸುನೀಲ್ ಕುಮಾರ್
ಉಡುಪಿ: 2014ರಲ್ಲಿ ಕಲ್ಲಿದ್ದಲಿನ ಬೇರೆಯ ಹೊಂದಾಣಿಕೆಗೋಸ್ಕರ ನಿಯಮಾವಳಿ ರೂಪಿಸಲಾಗಿತ್ತು, ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ. ನಮ್ಮ ಸರಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ನಿಯಮಾವಳಿ ಬಗ್ಗೆ ಮರುಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ದರ ಹೊಂದಾಣಿಕೆ ಮಾಡುವ ನಿಯಮದ ಬಗ್ಗೆ ಮರು ಚಿಂತನೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಗ್ರಾಹಕರಿಗೆ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ನನಗೂ ಅನ್ನಿಸಿದೆ. ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ ಬಾದಕಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಗತ್ಯ ಬಿದ್ದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಅವರು ತಿಳಿಸಿದರು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























