ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ, ನಾವೆಲ್ಲ ಯಾಕೆ?: ಅಧಿಕಾರ ಹಂಚಿಕೆ ಹೇಳಿಕೆ ಬಗ್ಗೆ ಪರಮೇಶ್ವರ್ ಗರಂ - Mahanayaka
10:27 AM Saturday 23 - August 2025

ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ, ನಾವೆಲ್ಲ ಯಾಕೆ?: ಅಧಿಕಾರ ಹಂಚಿಕೆ ಹೇಳಿಕೆ ಬಗ್ಗೆ ಪರಮೇಶ್ವರ್ ಗರಂ

parameshwar
05/12/2024


Provided by

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯಾಗಿದೆ ಎಂಬ ಚರ್ಚೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗರಂ ಆಗಿದ್ದಾರೆ.

ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಗೂ ನಮ್ಮ ನಡುವೆ ಯಾವುದೇ ಒಪ್ಪಂದವಾಗಿಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಬೇಡವಾ ಎಂದು ಪ್ರಶ್ನಿಸಿದ್ದಾರೆ.

ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ನಾನು 2—3 ಜನರನ್ನು ದೆಹಲಿಯಲ್ಲಿ ಕೇಳಿದೆ. ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಅಂತ ಯಾರೂ ಹೇಳಿಲ್ಲ. ಡಿ.ಕೆ.ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿಯಾಗಲು ಸಾಧ್ಯವಿಲ್ಲ. ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ