ಡಿ.ಕೆ.ಶಿವಕುಮಾರ್ ಕೂಡ ಲಿಮಿಟ್ ಮೀರಿ ಹೋಗಬಾರದು: ಸತೀಶ್ ಜಾರಕಿಹೊಳಿ - Mahanayaka
3:25 AM Monday 15 - September 2025

ಡಿ.ಕೆ.ಶಿವಕುಮಾರ್ ಕೂಡ ಲಿಮಿಟ್ ಮೀರಿ ಹೋಗಬಾರದು: ಸತೀಶ್ ಜಾರಕಿಹೊಳಿ

sathis jarakiholli
03/02/2023

ಬೆಂಗಳೂರು: ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವಿನ ಸಿಡಿ ಕದನಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.


Provided by

ಯಾರು ಕೂಡ ವೈಯಕ್ತಿಕ ಟೀಕೆ ಮಾಡಬಾರದು, ರಮೇಶ್ ಇರಬಹುದು, ಡಿ.ಕೆ.ಶಿವಕುಮಾರ್ ಇರಬಹುದು. ಯಾರೇ ಆಗಲಿ ಒಂದು ಲಿಮಿಟ್ ನಲ್ಲಿ ಹೇಳಿಕೆ ನೀಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಆರೋಪ ಮಾಡುವುದು ದೊಡ್ಡದಲ್ಲ, ಅದರಿಂದ ವೈಯಕ್ತಿಕವಾಗಿ ಹಾಗೂ ಪಕ್ಷಕ್ಕೂ ಹಾನಿಯಾಗುತ್ತದೆ. ರಮೇಶ್ ದೆಹಲಿ ಭೇಟಿ ವೇಳೆ ಪತ್ರಿಕೆ ನೋಡಿದೆ. ನಾನು ಮಾಧ್ಯಮಗಳ ಮೂಲಕ ರಮೇಶ್ ಗೆ ಕಿವಿಮಾತು ಹೇಳುತ್ತೇನೆ, ಯಾವುದೂ ಲಿಮಿಟ್ ಮೀರಿ ಹೋಗುವುದು ಬೇಡ ಎಂದು ಅವರು ಹೇಳಿದರು.

ಹೋರಾಟ ಯಾವಾಗಲೂ ಕಾನೂನಿನ ಚೌಕಟ್ಟಿನಲ್ಲೇ ಇರಬೇಕು. ಕಾನೂನು ಹೋರಾಟದ ಅವಕಾಶ ಎಲ್ಲರಿಗೂ ಇರುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ