ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಬಿಜೆಪಿ ಮಾಜಿ ಸಂಸದ ರಾವ್ ಸಾಹೇಬ್ ದಾನ್ವೆ ಪುತ್ರಿ - Mahanayaka

ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಬಿಜೆಪಿ ಮಾಜಿ ಸಂಸದ ರಾವ್ ಸಾಹೇಬ್ ದಾನ್ವೆ ಪುತ್ರಿ

28/10/2024

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನವೇ, ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ರಾವ್ ಸಾಹೇಬ್ ದಾನ್ವೆ ಅವರ ಮಗಳು ಸಂಜನಾ ಜಾಧವ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದಾರೆ. ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕನ್ನಡ್ ವಿಧಾನಸಭಾ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ನಾಮಪತ್ರ ಸಲ್ಲಿಕೆಗೆ ಕೇವಲ ಎರಡು ದಿನಗಳು ಬಾಕಿ ಇರುವಾಗಲೇ ಮಾಜಿ ಸಂಸದ ರಾಜೇಂದ್ರ ಗವಿತ್ ಮತ್ತು ವಿಲಾಸ್ ತಾರೆ ಕೂಡ ಶಿವಸೇನೆಗೆ ಸೇರಿದ್ದಾರೆ. ಶಿಂಧೆ ಮತ್ತು ಮಾಜಿ ಎಂಎಲ್ಸಿ ರವೀಂದ್ರ ಫಟಕ್ ಈ ನಾಯಕರನ್ನು ಸೇನಾ ತೆಕ್ಕೆಗೆ ಸ್ವಾಗತಿಸಿದರು.

ಜೂನ್ 2022 ರಲ್ಲಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ (ಆಗಿನ ಅವಿಭಜಿತ ಶಿವಸೇನೆಯಲ್ಲಿ) ದಂಗೆ ಎದ್ದಾಗ ಗವಿತ್ ಶಿಂಧೆ ಅವರ ಪರವಾಗಿ ನಿಂತರು. ಭಾನುವಾರ 20 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಶಿವಸೇನೆ ಪಾಲ್ಘರ್ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದರನ್ನು ಕಣಕ್ಕಿಳಿಸಿದೆ.


Provided by

288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ