ಬೆಂಕಿ ಅವಗಡ: ಜೀವ ಉಳಿಸಿಕೊಳ್ಳಲು 4 ಅಂತಸ್ತಿನ ಕಟ್ಟಡದಿಂದ ಜಿಗಿದ  ವ್ಯಕ್ತಿಯ ಸ್ಥಿತಿ ಚಿಂತಾಜನಕ - Mahanayaka
12:06 AM Saturday 23 - August 2025

ಬೆಂಕಿ ಅವಗಡ: ಜೀವ ಉಳಿಸಿಕೊಳ್ಳಲು 4 ಅಂತಸ್ತಿನ ಕಟ್ಟಡದಿಂದ ಜಿಗಿದ  ವ್ಯಕ್ತಿಯ ಸ್ಥಿತಿ ಚಿಂತಾಜನಕ

fire
18/10/2023


Provided by

ಬೆಂಗಳೂರು: ನಗರದ ಕೋರಮಂಗಲದ ಪಬ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಜೀವ ಉಳಿಸಿಕೊಳ್ಳಲು ವ್ಯಕ್ತಿಯೋರ್ವ ಮಹಡಿಯಿಂದ ಜಿಗಿದಿರುವ ಘಟನೆ ಜರುಗಿದೆ.

ಕೋರಮಂಗಲದ  4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ  ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್‌ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ.

ಕೋರಮಂಗಲದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಈ ವೇಳೆ  ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಕೊನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದು,ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

ಕಟ್ಟಡದ ಮೇಲ್ಬಾಗದಲ್ಲಿ 5-6 ಸಿಲಿಂಡರ್‌ ಗಳನ್ನು ಇಡಲಾಗಿತ್ತು ಎನ್ನಲಾಗಿದೆ.  ಸಿಲಿಂಡರ್ ಬ್ಲಾಸ್ಟ್ ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬಿಲ್ಡಿಂಗ್ ಹತ್ತಿರವೂ ಸುಳಿಯಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಅಕ್ಕ-ಪಕ್ಕದ ಬಿಲ್ಡಿಂಗ್‌ ಗೆ ಬೆಂಕಿ ಆವರಿಸುವ ಆತಂಕದಲ್ಲಿದ್ದಾರೆನ್ನಲಾಗಿದೆ.

ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸಪಡುತ್ತಿದ್ದಾರೆ.ಹೀಗಾಗಿ ಅಕ್ಕಪಕ್ಕದವರನ್ನು ತೆರವು‌ ಮಾಡಲಾಗಿದೆನ್ನಲಾಗಿದೆ.

ಇದನ್ನೂ ಓದಿ:

ಮತ್ತೊಂದು ಪಟಾಕಿ ದುರಂತ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ

 

ಇತ್ತೀಚಿನ ಸುದ್ದಿ