ದೆಹಲಿಯ ಕಮಲಾ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿ ವಿರುದ್ಧ ಹೊಸ ದಂಡ ಸಂಹಿತೆಯಡಿ ಮೊದಲ ಕೇಸ್ ದಾಖಲು - Mahanayaka
12:19 AM Thursday 21 - August 2025

ದೆಹಲಿಯ ಕಮಲಾ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿ ವಿರುದ್ಧ ಹೊಸ ದಂಡ ಸಂಹಿತೆಯಡಿ ಮೊದಲ ಕೇಸ್ ದಾಖಲು

01/07/2024


Provided by

ಹೊಸ ಕ್ರಿಮಿನಲ್ ಕಾನೂನುಗಳು ಸೋಮವಾರ ಜಾರಿಗೆ ಬರುತ್ತಿದ್ದಂತೆ, ಸೆಕ್ಷನ್ ಭಾರತೀಯ ನ್ಯಾಯ ಸಂಹಿತಾ-2023 ರ ಅಡಿಯಲ್ಲಿ ಮೊದಲ ಎಫ್ಐಆರ್ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ನವದೆಹಲಿ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆಗೆ ಅಡ್ಡಿಪಡಿಸಿ ಮಾರಾಟ ಮಾಡಿದ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 285 ರ ಅಡಿಯಲ್ಲಿ ಬೀದಿ ವ್ಯಾಪಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಿಹಾರದ ಬಾರ್ಹ್ ನಿವಾಸಿ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಮುಖ್ಯ ರಸ್ತೆಯ ಬಳಿ ಗಾಡಿಯಲ್ಲಿ ತಂಬಾಕು ಮತ್ತು ನೀರನ್ನು ಮಾರಾಟ ಮಾಡುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು.

ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದ ಎಫ್ಐಆರ್ ಪ್ರಕಾರ, ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಕುಮಾರ್ ಅವರನ್ನು ತಮ್ಮ ಗಾಡಿಯನ್ನು ತೆಗೆಯುವಂತೆ ಹೇಳಿದ್ರೂ ಕೂಡಾ ಅವರು ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸಿದರು. ಈ ಘಟನೆಯು ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಮೊದಲ ಎಫ್ಐಆರ್ ದಾಖಲಿಸಲು ಕಾರಣವಾಯಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ