ಐದೂ ಗ್ಯಾರಂಟಿಗಳನ್ನ ಈ ಆರ್ಥಿಕ ವರ್ಷದಲ್ಲೇ ಜಾರಿ ಮಾಡ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಐದೂ ಗ್ಯಾರಂಟಿಗಳನ್ನ ಈ ಆರ್ಥಿಕ ವರ್ಷದಲ್ಲೇ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ದೊಡ್ಡ ಗಾತ್ರದ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮ ಪಕ್ಷದ ಗ್ಯಾರಂಟಿ ಏನಿದೆ ಅದನ್ನು ತಿಳಿಸುತ್ತೇವೆ. ವಿಧಾನಸಭಾ ಚುನಾವಣೆ ವೇಳೆ ಪಕ್ಷದ ವತಿಯಿಂದ ಐದು ಗ್ಯಾರಂಟಿಗಳನ್ನ ಘೋಷಿಸಲಾಗಿತ್ತು. ಗ್ಯಾರಂಟಿ ಕಾರ್ಡ್ ಗಳಿಗೆ ನಾನು ಮತ್ತು ಡಿ.ಕೆ ಶಿವಕುಮಾರ್ ಸಹಿ ಹಾಕಿದ್ದೆವು ಎಂದರು.
ಗ್ಯಾರಂಟಿ ಕಾರ್ಡ್ಗಳನ್ನು ಕಾರ್ಯಕರ್ತರ ಮೂಲಕ ಮನೆಮನೆಗಳಿಗೆ ಹಂಚಿದ್ದೆವು. ಆದರೆ, ವಿರೋಧ ಪಕ್ಷಗಳು ಇದನ್ನು ಟೀಕೆ ಮಾಡಿವೆ. ನಾವು ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಸಚಿವ ಸಂಪುಟ ಸಭೆ ನಡೆಸಿದ್ದೆವು. ಅಂದೇ ಗ್ಯಾರಂಟಿಗೆ ಆದೇಶ ಹೊರಡಿಸಿ ತಾತ್ವಿಕ ಒಪ್ಪಿಗೆ ನೀಡಿದ್ದೆವು. ಇಂದು ವಿಶೇಷವಾದ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಸುದೀರ್ಘವಾಗಿ ಐದು ಗ್ಯಾರಂಟಿಗಳನ್ನ ಚರ್ಚಿಸಿದ್ದೇವೆ ಎಂದರು.
ಯಾವುದೇ ಜಾತಿ, ಧರ್ಮ ಭೇದ ಇಲ್ಲದೆ ರಾಜ್ಯದ ಎಲ್ಲಾ ಜನರಿಗೆ ಗ್ಯಾರಂಟಿಗಳನ್ನ ಜಾರಿ ಮಾಡುತ್ತೇವೆ
ಇದರಲ್ಲಿ ಯಾವುದೇ ಧರ್ಮ, ಜಾತಿ ಇಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw