10:03 AM Wednesday 10 - December 2025

ಮಾಟ ಮಂತ್ರದ ಶಂಕೆ: ಒಂದೇ ಕುಟುಂಬದ ಐವರ ಭೀಕರ ಹತ್ಯೆ

bihara
08/07/2025

ಬಿಹಾರ:  ಮಾಟ ಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಒಂದೇ ಕುಟುಂಬದ  ಐದು ಮಂದಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿ, ಮೃತದೇಹಗಳನ್ನು ಸುಟ್ಟು ಹಾಕಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಟೆಟ್ಮಾ ಗ್ರಾಮದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ  ಒಬ್ಬ ಮಾಂತ್ರಿಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಸುಮಾರು 30ರಿಂದ 40 ಗ್ರಾಮಸ್ಥರು ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ದುಷ್ಕರ್ಮಿಗಳ ದಾಳಿ ವೇಳೆ ಈ ಕುಟುಂಬದ 16 ವರ್ಷದ ಬಾಲಕ ಉದ್ರಿಕ್ತ ಗುಂಪಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದು, ತನ್ನ ಅಜ್ಜಿ ಮನೆಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾನೆ. ಬಳಿಕ ಬಾಲಕ ನೀಡಿದ ಮಾಹಿತಿ ಆಧರಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಹೀಗಾಗಿ ಘಟನೆ ಬೆಳಕಿಗೆ ಬಂದಿದೆ.

ಸೀತಾ ದೇವಿ, ಕಾಳಿ, ರಾಣಿ ದೇವಿ, ಬಾಬು ಲಾಲ್ ಮತ್ತು ಮಂಜೀತ್ ರಾಮ್ ಹತ್ಯೆಗೊಳಗಾದವರು ಎಂದು ತಿಳಿದು ಬಂದಿದೆ. ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿ ಬಳಿಕ ಶವಗಳನ್ನು ಟ್ರ್ಯಾಕ್ಟರ್‌ ನಲ್ಲಿ ಪೊದೆವರೆಗೂ ತೆಗೆದುಕೊಂಡು ಹೋಗಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಗುವೊಂದು ಸಾವನ್ನಪ್ಪಿತ್ತು. ಈ ಮಹಿಳೆಯರ  ಮಾಟದಿಂದಲೇ ಮಗು ಸಾವನ್ನಪ್ಪಿದೆ ಎಂದು ಯಾರೋ ಪಿತೂರಿ ನಡೆಸಿ, ಈ ಕುಟುಂಬವನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version