ಗೌರಿಗಣೇಶ ಹಬ್ಬ: ಫುಟ್ಪಾತ್ ನಲ್ಲೇ ಟರ್ಪಾಲು ಹಾಸಿದ ಹೂವಿನ ವ್ಯಾಪಾರಿಗಳು! - Mahanayaka

ಗೌರಿಗಣೇಶ ಹಬ್ಬ: ಫುಟ್ಪಾತ್ ನಲ್ಲೇ ಟರ್ಪಾಲು ಹಾಸಿದ ಹೂವಿನ ವ್ಯಾಪಾರಿಗಳು!

udupi footpath
27/08/2022


Provided by

ಉಡುಪಿ: ಗೌರಿಗಣೇಶ ಹಬ್ಬಕ್ಕೆ ಕೆಲವು ದಿನಗಳು ಇನ್ನೂ ಬಾಕಿ ಇರುವಾಗಲೇ, ಕವಿ ಮುದ್ದಣ ಮಾರ್ಗದ ತ್ರಿವೇಣಿ ಸರ್ಕಲ್ ಬಳಿಯ ಪಾದಚಾರಿ ರಸ್ತೆಯಲ್ಲಿ ಟಾರ್ಪಲು ಹೊದಿಸಿ, ಪಾದೆಕಲ್ಲು ಹಾಕಿ ತಮ್ಮ ಮಾರಾಟದ ಸ್ಥಳಗಳನ್ನು ಹೂವಿನ ವ್ಯಾಪಾರಿಗಳು ಕಾಯ್ದಿರಿಸಿಕೊಂಡಿದ್ದಾರೆ.

ಸಾರ್ವಜನಿಕರು, ಹಿರಿಯ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ದಿವ್ಯಾಂಗರು, ನಡೆದಾಡಲು ಸುರಕ್ಷಿತ ಪಾದಚಾರಿ ರಸ್ತೆ ಬಿಟ್ಟು ವಾಹನ ದಟ್ಟಣೆಯ ನಡುರಸ್ತೆಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ರಸ್ತೆಯ ಬದಿಯಲ್ಲಿ ವಾಹನ ನಿಲುಗಡೆ ಸ್ಥಳ ಇದ್ದು, ಜನ ನಡೆದಾಡಲು ಸಮಸ್ಯೆ ಎದುರಾಗಿದೆ. ಸಮಸ್ಯೆಯ ಕುರಿತು ಸಾರ್ವಜನಿಕರ ದೂರುಗಳು ಕೇಳಿಬಂದಿವೆ. ನಗರಸಭೆ ತಕ್ಷಣ ಸಮಸ್ಯೆಯತ್ತ ಗಮನ ಹರಿಸಬೇಕಾಗಿದೆ ಎಂದು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

footpath

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ