ಭೀಕರ: ಅರುಣಾಚಲ ಪ್ರದೇಶದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮಾಜಿ ಕಾಂಗ್ರೆಸ್ ಶಾಸಕ ಯುಮ್ಸೆನ್ ಮೇಟಿ ಹತ್ಯೆ

17/12/2023

ಅರುಣಾಚಲ ಪ್ರದೇಶದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಮಾಜಿ ಕಾಂಗ್ರೆಸ್ ಶಾಸಕ ಯುಮ್ಸೆನ್ ಮೇಟಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯಲ್ಲಿ ನಡೆದ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೇಟಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ವರದಿಗಳ ಪ್ರಕಾರ, ಮಾಜಿ ಶಾಸಕ ಮತ್ತು ಮೂವರು ಸಹಚರರು ಗ್ರಾಮದಲ್ಲಿದ್ದಾಗ ವ್ಯಕ್ತಿಯೊಬ್ಬರು ಅವರನ್ನು ಹತ್ತಿರದ ಕಾಡಿಗೆ ಕರೆದೊಯ್ದರು. ಅಲ್ಲಿ ಮೇಟಿಯನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಲ್ಲಲಾಯಿತು. ದಾಳಿಕೋರನು ಮ್ಯಾನ್ಮಾರ್ ಕಡೆಗೆ ಪರಾರಿಯಾಗಿದ್ದಾನೆ. ದಾಳಿಕೋರರ ಗುರುತನ್ನು ಪೊಲೀಸರು ಬಹಿರಂಗಪಡಿಸದಿದ್ದರೂ, ಎನ್ಎಸ್ಸಿಎನ್-ಕೆವೈಎ ಭಯೋತ್ಪಾದಕ ಗುಂಪಿನೊಂದಿಗೆ ಇರುವ ಸಂಪರ್ಕದ ಬಗ್ಗೆ ಅನುಮಾನಗಳಿವೆ. ಪೊಲೀಸರು ದುಷ್ಕರ್ಮಿಗಾಗಿ ಶೋಧ ಆರಂಭಿಸಿದ್ದಾರೆ.

2009ರಲ್ಲಿ ಖೋನ್ಸಾ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅವರ ಅಧಿಕಾರಾವಧಿಯುದ್ದಕ್ಕೂ ಅವರು ಸಂಸದೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆಗಳು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಬುಡಕಟ್ಟು ವ್ಯವಹಾರಗಳ ಜವಾಬ್ದಾರಿ ವಹಿಸಿದ್ದರು. 2015 ರಲ್ಲಿ ಮೇಟಿ ಬಿಜೆಪಿಗೆ ಸೇರಿದ್ದರು. ಈ ವರ್ಷದ ಆರಂಭದಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಿದ್ಧರಿರುವುದಾಗಿ ಹೇಳಿದ್ದರು.

ಇತ್ತೀಚಿನ ಸುದ್ದಿ

Exit mobile version