ನೂತನ ಕೃಷಿ ಮಸೂದೆ ವಿರೋಧಿಸಿ, ರೈತರ ಪ್ರತಿಭಟನೆಗೆ ಬೆಂಬಲಿಸಿದ “ದಿ ಗ್ರೇಟ್ ಖಲಿ” - Mahanayaka

ನೂತನ ಕೃಷಿ ಮಸೂದೆ ವಿರೋಧಿಸಿ, ರೈತರ ಪ್ರತಿಭಟನೆಗೆ ಬೆಂಬಲಿಸಿದ “ದಿ ಗ್ರೇಟ್ ಖಲಿ”

02/12/2020

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಟೆಕ್ರಿ ಗಡಿಯಲ್ಲಿ ರೈತರ ಚಳವಳಿ ನಡೆಯುತ್ತಿದ್ದು, ಮಾಜಿ ಡಬ್ಲ್ಯುಡಬ್ಲ್ಯುಇ ಚಾಂಪಿಯನ್ “ದಿ ಗ್ರೇಟ್ ಖಲಿ” ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ತಾವು ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ ಚಿತ್ರವನ್ನು ಇನ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. “ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಈ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.


ಟೆಕ್ರಿ ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೊಸ ಕೃಷಿ ಕಾನೂನಿನಿಂದ ರೈತರು ಎದುರಿಸಬೇಕಾದ ಸಂಕಷ್ಟಗಳ ಬಗ್ಗೆ ವಿವರಿಸಿದರು. ಅಲ್ಲದೇ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕಾದರೆ ಎಲ್ಲರೂ ರೈತರ ಪರವಾಗಿ ನಿಲ್ಲಬೇಕಿದೆ ಎಂದು ಅವರು ಮನವಿ ಮಾಡಿದರು.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ