ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ನಾಲ್ಕನೇ ಭಾರತೀಯನ ಬಂಧನ - Mahanayaka
11:41 AM Saturday 23 - August 2025

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ನಾಲ್ಕನೇ ಭಾರತೀಯನ ಬಂಧನ

12/05/2024


Provided by

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾ ನಾಲ್ಕನೇ ವ್ಯಕ್ತಿಯನ್ನು ಬಂಧಿಸಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ.
ಸಮಗ್ರ ನರಹತ್ಯೆ ತನಿಖಾ ತಂಡ (ಐಎಚ್ಐಟಿ) ಅಮನ್ದೀಪ್ ಸಿಂಗ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಥಮ ದರ್ಜೆ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿಯ ಆರೋಪ ಹೊರಿಸಿದೆ.

ಬ್ರಾಂಪ್ಟನ್ ನಲ್ಲಿ ವಾಸಿಸುವ ಭಾರತೀಯ ಪ್ರಜೆ 22 ವರ್ಷದ ಅಮನ್ ದೀಪ್ ಸಿಂಗ್ ಈಗಾಗಲೇ ಬಂದೂಕು ಹೊಂದಿದ ಆರೋಪದ ಮೇಲೆ ಒಂಟಾರಿಯೊದಲ್ಲಿ ಬಂಧನದಲ್ಲಿದ್ದಾರೆ ಎಂದು ಐಎಚ್ಐಟಿ ತಿಳಿಸಿದೆ.

“ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಪಾತ್ರವಹಿಸಿದವರನ್ನು ಹೊಣೆಗಾರರನ್ನಾಗಿ ಮಾಡಲು ನಡೆಯುತ್ತಿರುವ ತನಿಖೆಯ ಸ್ವರೂಪವನ್ನು ಈ ಬಂಧನವು ತೋರಿಸುತ್ತದೆ” ಎಂದು ಐಎಚ್ಐಟಿ ಉಸ್ತುವಾರಿ ಅಧಿಕಾರಿ ಮನ್ದೀಪ್ ಮುಖರ್ಜಿ ಹೇಳಿದ್ದಾರೆ.

ಕರಣ್ ಬ್ರಾರ್ (22), ಕಮಲ್ಪ್ರೀತ್ ಸಿಂಗ್ (22), ಕರಣ್ಪ್ರೀತ್ ಸಿಂಗ್ (28) ಅವರೊಂದಿಗೆ ಅಮನ್ದೀಪ್ ಸಿಂಗ್ ಅವರನ್ನು ಬಂಧಿಸಲಾಗಿದೆ. ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಇದೇ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ