11:11 PM Thursday 15 - January 2026

ಕಾರಾಗೃಹದಲ್ಲಿ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಖೈದಿ

crime
16/02/2022

ಶಿವಮೊಗ್ಗ: ಜಾಮೀನು ಕೊಡಿಸುತ್ತಿಲ್ಲ ಎಂದು ಮನನೊಂದಿದ್ದ ಖೈದಿಯೊಬ್ಬ ಗ್ರಂಥಾಲಯಕ್ಕೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿಯಾಗಿದ್ದಾನೆ. ಈತ ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ.
ಗಾಂಜಾ ಹಾಗೂ ಮದ್ಯ ವ್ಯಸನಿಯಾಗಿದ್ದ ಈತನನ್ನು ನೋಡಲು ಕಾರಾಗೃಹಕ್ಕೆ ಯಾರೂ ಬರುತ್ತಿರಲಿಲ್ಲ. ಜಾಮೀನು ಕೊಡಿಸುತ್ತಿಲ್ಲ ಎಂದು ಮನನೊಂದಿದ್ದ ಎನ್ನಲಾಗಿದೆ. ಗಾಯಗೊಂಡ ಖೈದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹುಲಿ ಚರ್ಮ ಮಾರಾಟಕ್ಕೆ ಯತ್ನ: ನಾಲ್ವರು ಆರೋಪಿಗಳ ಬಂಧನ

ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ

ರೈಲು ಹಳಿಯ ಮೇಲೆ ನಿಂತು ಸೆಲ್ಫಿ: ನಾಲ್ವರು ಯುವಕರ ದುರ್ಮರಣ

ಅಮ್ಮನ ಸಾವಿಗೆ ಕಾರಣವಾದ ಮಗಳ ವಾಟ್ಸಾಪ್ ಸ್ಟೇಟಸ್‌

ಇತ್ತೀಚಿನ ಸುದ್ದಿ

Exit mobile version