ಗಣಪತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ: ಯುವಕನ ಹತ್ಯೆ - Mahanayaka

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ: ಯುವಕನ ಹತ್ಯೆ

ramanagara
13/09/2021

ರಾಮನಗರ: ಗಣೇಶೋತ್ಸವ ಎಂದರೆ, ಯುವಕರ ಒಗ್ಗಟ್ಟು ಕಂಡು ಬರುವುದು ಸಹಜವಾಗಿದೆ ಆದರೆ, ಮಾಗಡಿ ತಾಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಓರ್ವ ಯುವಕನ ಹತ್ಯೆಯಲ್ಲಿ ಘರ್ಷಣೆ ಮುಗಿದಿದೆ.


Provided by

45 ವರ್ಷ ವಯಸ್ಸಿನ ಸುಗಂಧ ರಾಜು ಹತ್ಯೆಗೀಡಾದವರು ಎಂದು ತಿಳಿದು ಬಂದಿದ್ದು, ಗಣೇಶೋತ್ಸವದ ಬಳಿಕ ಗಣಪತಿ ಮೂರ್ತಿಯ ವಿಸರ್ಜನೆ ನಡೆಸುವ ವೇಳೆ ಗುಂಪುಗಳ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಗಲಾಟೆ ಘರ್ಷಣೆಗೆ ತಿರುಗಿದೆ ಎಂದು ಹೇಳಲಾಗಿದೆ.

ಕಬ್ಬಿಣದ ರಾಡ್ ನಿಂದ ಸುಗಂಧರಾಜು ಅವರಿಗೆ ಹಲ್ಲೆ ನಡೆಸಲಾಗಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಲಾಗಿದೆ.


Provided by

ಇನ್ನಷ್ಟು ಸುದ್ದಿಗಳು…

ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತುಕೊಂಡು ಓಡಾಡುತ್ತಿದ್ದ ಶೋಭಾ ಕರಂದ್ಲಾಜೆ ಇಗೆಲ್ಲಿದ್ದಾರಪ್ಪಾ? | ಸಿದ್ದರಾಮಯ್ಯ ಪ್ರಶ್ನೆ

“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು

ಎತ್ತಿನಗಾಡಿಯಿಂದ ಕೆಳಕ್ಕೆ ಉರುಳಿದ ಕಾಂಗ್ರೆಸ್ ನಾಯಕರು

ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!

ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ

ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ನಾಲ್ಕು ವರ್ಷ ವಯಸ್ಸಿನ ಬಾಲಕನ ದಾರುಣ ಸಾವು!

ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ

 

ಇತ್ತೀಚಿನ ಸುದ್ದಿ