ಸ್ನೇಹಿತೆ ಸೈಕಲ್ ಕೊಡಲಿಲ್ಲ ಎಂದು ನೊಂದು ಬಾಲಕಿ ಆತ್ಮಹತ್ಯೆಗೆ ಶರಣು

26/04/2025
ಚಿತ್ರದುರ್ಗ: ಪಕ್ಕದ ಮನೆಯ ಸ್ನೇಹಿತೆ ತನಗೆ ಸೈಕಲ್ ಕೊಡಲಿಲ್ಲ ಎಂದು ನೊಂದು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ
ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು. ಆಕೆ ಸೈಕಲ್ ನೀಡಿಲ್ಲ ಎಂಬ ಕಾರಣಕ್ಕೆ ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD