8:45 AM Saturday 12 - September 2026

15 ಗ್ರಾ.ಪಂ.ಗಳಲ್ಲಿ ಚುನಾವಣೆ ಬಹಿಷ್ಕರಿಸಿದ ಜನರು | ಕಾರಣ ಏನು ಗೊತ್ತಾ?

22/12/2020

ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಈ 15 ಗ್ರಾಮಪಂಚಾಯತ್ ಗಳಲ್ಲಿ ಯಾರು ಕೂಡ ನಾಮಪತ್ರವನ್ನು ಸಲ್ಲಿಸಿಲ್ಲ.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಡಾ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಬರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜನರಲ್ಲಿ ಆತಂಕ ಎದುರಾಗಿದೆ.

ತಮ್ಮ ಅಸ್ತಿತ್ವಕ್ಕೆ ಕೇಂದ್ರ ಸರ್ಕಾರ ಹೊಡೆತ ನೀಡಿದ್ದು, ಇದರಿಂದಾಗಿ ಆತಂಕಕ್ಕೊಳಗಾಗಿರುವ  15 ಗ್ರಾಮ ಪಂಚಾಯತ್  ಜನರು  ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version