ಗರ್ಭಿಣಿಯನ್ನು ನೆಲಕ್ಕೆ ತಳ್ಳಿದ ಬಿಜೆಪಿ ಮುಖಂಡ ಸವದಿ | ಮಹಿಳೆಗೆ ಗರ್ಭಪಾತ!
ಮಹಾಲಿಂಗಪುರ: ಪುರಸಭೆ ಆವರಣದಲ್ಲಿ ಬಿಜೆಪಿ ಮುಖಂಡ ಹಾಗೂ ಬೆಂಬಲಿಗರು ಗರ್ಭಿಣಿ ಪುರಸಭೆ ಸದಸ್ಯೆಯನ್ನು ಎಳೆದಾಡಿದ ಪರಿಣಾಮ ಮಹಿಳೆಗೆ ಇದೀಗ ಗರ್ಭಪಾತವಾಗಿದೆ.
ಮಹಾಲಿಂಗಪುರ ಪುರಸಭೆ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಬೆಂಬಲಿಗರು ಪುರಸಭೆ ಸದಸ್ಯೆ ಚಾಂದಿನಿ ನಾಯಕ್ ಅವರನ್ನು ಗರ್ಭಿಣಿ ಎಂದೂ ನೋಡದೇ ಎಳೆದಾಡಿ ನೆಲಕ್ಕೆ ತಳ್ಳಿ ಹಾಕಿದ್ದರು.
ನೆಲಕ್ಕೆ ಬಿದ್ದ ಚಾಂದಿನಿ ನಾಯಕ್ ಅವರಿಗೆ ತೀವ್ರವಾಗಿ ಗಾಯವಾಗಿತ್ತು. ಆ ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಇದರ ಬೆನ್ನಿಗೆ ಇದೀಗ ಚಾಂದಿನಿ ನಾಯಕ್ ಅವರಿಗೆ ಗರ್ಭಪಾತವಾಗಿದೆ.
ಮೂರು ತಿಂಗಳ ಗರ್ಭಿಣಿ ಚಾಂದಿನಿ ನಾಯಕ್ ಅವರು ಇದೀಗ ಬಿಜೆಪಿ ನಾಯಕ ಸವದಿ ಹಾಗೂ ಬಿಜೆಪಿ ಕಾರ್ಯಕರ್ತರ ಕುಕೃತ್ಯದಿಂದಾಗಿ ತಮ್ಮ ಮಗುವನ್ನು ಕಳೆದುಕೊಂಡಿದ್ದಾರೆ. ಘಟನೆ ಹಿನ್ನೆಲೆ ಇದೀಗ ಬಿಜೆಪಿ ನಾಯಕರ ವಿರುದ್ಧ ಕೊಲೆ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.