ಗುಜರಾತ್ ನಲ್ಲಿ ದರ್ಗಾ ವಿವಾದ: ಜನರ ಆಕ್ರೋಶಕ್ಕೆ ಕಾರಣವಾದ ಆ ಒಂದು ‌ನೋಟೀಸ್..!

17/06/2023

ಅತಿಕ್ರಮಣದ ಆರೋಪದ ಹಿನ್ನೆಲೆಯಲ್ಲಿ ಜಾಗ ತೆರವುಗೊಳಿಸಲು ದರ್ಗಾವನ್ನು ನೆಲಸಮಗೊಳಿಸುವ ನಾಗರಿಕ ಸಂಸ್ಥೆಯ ಯೋಜನೆಯನ್ನು ವಿರೋಧಿಸಿ ಜನರ ಗುಂಪೊಂದು ಕಲ್ಲು ತೂರಾಟ ಹಾಗೂ ವಾಹನಕ್ಕೆ ಬೆಂಕಿ ಹಚ್ಚಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಕನಿಷ್ಠ ಐದು ಪೊಲೀಸ್ ಸಿಬ್ಬಂದಿ ಗಾಯಗೊಂಡ
ಘಟನೆ ಗುಜರಾತ್ ನ ಜುನಗಢ್ ನ ಮಜೆವಾಡಿ ದರ್ವಾಜಾ ಬಳಿ ನಡೆದಿದೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದರು. ಇದೇ ವೇಳೆ ಪೊಲೀಸರು 174 ಜನರನ್ನು ಸುತ್ತುವರೆದರು. ಮರಣೋತ್ತರ ಪರೀಕ್ಷೆಯ ನಂತರ ವ್ಯಕ್ತಿಯ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ. ಆದರೆ ಜನರ ಗುಂಪೊಂದು ಎಸೆದ ಕಲ್ಲಿಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಜೂನ್ 14 ರಂದು ಜುನಗಢ ಮುನ್ಸಿಪಲ್ ಕಾರ್ಪೊರೇಷನ್ ಮಜೆವಾಡಿ ದರ್ವಾಜಾ ಬಳಿಯ ಮಸೀದಿಗೆ ಭೂಮಿಯ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ನೋಟಿಸ್ ನೀಡಿತ್ತು.

ನೋಟಿಸ್ ನಿಂದ ಆಕ್ರೋಶಗೊಂಡ ಸುಮಾರು 500-600 ಜನರು ಶುಕ್ರವಾರ ರಾತ್ರಿ ಧಾರ್ಮಿಕ ಕಟ್ಟಡದ ಬಳಿ ಜಮಾಯಿಸಿ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿ ತೇಜಾ ವಸ್ಸಮ್ ಸೆಟ್ಟಿ ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ಜುನಗಢದ ಡಿವೈಎಸ್ಪಿ ಮತ್ತು ಇತರ ಸಿಬ್ಬಂದಿ ಜನರನ್ನು ಮನವೊಲಿಸಲು ಪ್ರಯತ್ನಿಸಿದರು. ಈ ಕುರಿತು ಶಾಂತಿಯುತ ಪರಿಹಾರವನ್ನು ಕಂಡುಹಿಡಿಯಲು ಮತ್ತು ಪ್ರತಿಭಟನಾಕಾರರ ರಸ್ತೆ ದಿಗ್ಬಂಧನವನ್ನು ತೆರವುಗೊಳಿಸುವ ಉದ್ದೇಶದಿಂದ ಸುಮಾರು ಒಂದು ಗಂಟೆಗಳ ಸುದೀರ್ಘ ಚರ್ಚೆ ನಡೆಯಿತು.

ಆದರೆ 10.15 ರ ಸುಮಾರಿಗೆ ಪೊಲೀಸ್ ಸಿಬ್ಬಂದಿಯ ಮೇಲೆ ಕೆಲವರು ಕಲ್ಲುಗಳನ್ನು ಎಸೆದಿದ್ದಾರೆ. ದರ್ಗಾಕ್ಕೆ ನೋಟಿಸ್ ನೀಡಿದ್ದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದ ಕೆಲವರು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version