ಗುರುದ್ವಾರದಲ್ಲಿ ಧಾರ್ಮಿಕ ಧ್ವಜ ತೆಗೆಯಲು ಯತ್ನಿಸಿದ ಆರೋಪ: ವ್ಯಕ್ತಿಗೆ ಥಳಿತ - Mahanayaka

ಗುರುದ್ವಾರದಲ್ಲಿ ಧಾರ್ಮಿಕ ಧ್ವಜ ತೆಗೆಯಲು ಯತ್ನಿಸಿದ ಆರೋಪ: ವ್ಯಕ್ತಿಗೆ ಥಳಿತ

gurudwara
19/12/2021

ಅಮೃತಸರ: ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ಧಾರ್ಮಿಕ ಧ್ವಜವನ್ನು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಸಿಖ್ ಭಕ್ತರು ಓರ್ವ ವ್ಯಕ್ತಿಯನ್ನು ಹಿಡಿದು ಥಳಿಸಿರುವ ಘಟನೆ ಭಾನುವರ ಬೆಳಗ್ಗೆ ವರದಿಯಾಗಿದೆ.

ಈ ವ್ಯಕ್ತಿ ನಿಜಾಂಪುರದ ಗುರುದ್ವಾರದಲ್ಲಿ ಸಿಖ್ಖರ ಧಾರ್ಮಿಕ ಧ್ವಜವಾದ ನಿಶಾನ್ ಸಾಹಿಬ್​​ನನ್ನು ತೆಗೆದುಹಾಕಲು ಪ್ರಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಪೊಲೀಸರಿಗೆ ಒಪ್ಪಿಸಲು ನಿರಾಕರಿಸಿರುವ ಭಕ್ತರು ಚೆನ್ನಾಗಿ ಥಳಿಸಿದ್ದಾರೆ.

ಪೊಲೀಸರು ಮತ್ತು ಇತರ ಯಾವುದೇ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಬಾರದು. ಇಂತಹ ಪ್ರಕರಣಗಳು ನಡೆಯಲು ಪಂಜಾಬ್ ಪೊಲೀಸರು ಮತ್ತು ರಾಜ್ಯ ಸರ್ಕಾರ ಜವಾಬ್ದಾರರಾಗಿರುತ್ತಾರೆ ಎಂದು ಗುರುದ್ವಾರದಿಂದ ಮಾಡಲಾದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ: 43 ಭಾರತೀಯ ಮೀನುಗಾರರ ಬಂಧನ

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಿ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ಪಶ್ಚಿಮ ಬಂಗಾಳ: ಬೆಳೆ ನಾಶ ಬೇಸತ್ತು ಮೂವರು ರೈತರ ಆತ್ಮಹತ್ಯೆ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಅಕ್ಷಮ್ಯ ಅಪರಾಧ: ಬಿ.ಎಸ್‌.ಯಡಿಯೂರಪ್ಪ

ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ

ಕೊಲೆಗೆ ಕೊಲೆಯೇ ಉತ್ತರವಾಯ್ತು!: ಎಸ್ ಡಿಪಿಐ ಮುಖಂಡನ ಕೊಲೆ ನಡೆದು ಬೆಳಗಾಗುವಷ್ಟರಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಇತ್ತೀಚಿನ ಸುದ್ದಿ