4:28 AM Thursday 16 - October 2025

ಎಎಪಿ ಅಭ್ಯರ್ಥಿಯನ್ನು ನಿಂದಿಸಿದ ಹರಿಯಾಣ ಅಧಿಕಾರಿ ಅಮಾನತು

07/04/2024

ಚುನಾವಣಾ ಆಯೋಗದ ದಾಖಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯನ್ನು ನಿಂದಿಸಿದ ಆರೋಪದ ಮೇಲೆ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಹರಿಯಾಣ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡ ಅಧಿಕಾರಿಯ ಕಚೇರಿಯ ಕಂಪ್ಯೂಟರ್ ಆಪರೇಟರ್, ಕೈಥಾಲ್‌ನಲ್ಲಿ ಸಹಾಯಕ ಚುನಾವಣಾಧಿಕಾರಿ (ಎಆರ್ ಓ) ಆಗಿರುವ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಬ್ರಹ್ಮ ಪ್ರಕಾಶ್ ಅವರು ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಗಳನ್ನು ನಡೆಸಲು ಎಎಪಿಗೆ ಅನುಮತಿ ನಿರಾಕರಿಸುವಾಗ ‘ಅನುಚಿತ ಭಾಷೆ’ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಚುನಾವಣಾ ಆಯೋಗದ ಪೋರ್ಟಲ್ ನಲ್ಲಿ ಚುನಾವಣಾ ರ್ಯಾಲಿಗಳಿಗೆ ಅನುಮತಿ ಕೋರಿ ಎಎಪಿ ತನ್ನ ವಿನಂತಿಯನ್ನು ಸಲ್ಲಿಸಿತ್ತು. ಎರಡು ಚುನಾವಣಾ ಕಾರ್ಯಕ್ರಮಗಳಿಗೆ ಅಧಿಕಾರಿಗಳಿಂದ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರದಲ್ಲಿ ನಿಂದನಾತ್ಮಕ ಭಾಷೆಯಿಂದ ನಿರಾಕರಿಸಲಾಗಿದೆ ಎಂದು ಪಕ್ಷ ಹೇಳಿದೆ.
ಕೈಥಾಲ್ ಎಸ್ಡಿಎಂ ಕಚೇರಿಯ ಕಂಪ್ಯೂಟರ್ ಆಪರೇಟರ್ ಗಳಲ್ಲಿ ಒಬ್ಬರು ಅನುಮತಿ ನಿರಾಕರಿಸುವಾಗ ‘ಅನುಚಿತ ಭಾಷೆ’ ಬಳಸಿದ್ದಾರೆ ಎಂದು ವರದಿಯಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version