ಕುಡಿತದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ! - Mahanayaka

ಕುಡಿತದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ!

udupi
13/05/2025


Provided by
Provided by
Provided by

Provided by
Provided by
Provided by
Provided by
Provided by
Provided by

ಉಡುಪಿ: ವ್ಯಕ್ತಿಯೊಬ್ಬ ಕುಡಿತದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಲಕ್ಷಣ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ಭಾನುವಾರ ನಡೆದಿದೆ.

ಕುಡಿದು ಬಂದು ರಂಪಾಟ ಮಾಡಿದ ಕುಡುಕ ತನ್ನದೇ ಮನೆಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾನೆ. ಆತನ ಹುಚ್ಚಾಟವನ್ನು ಎದುರಿಸಲಾಗದ ಕುಟುಂಬ ತಕ್ಷಣವೇ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿ, ತಮಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಬಂದ ನಿತ್ಯಾನಂದ ಒಳಕಾಡು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ, ನಡೆಯಬಹುದಾಗಿದ್ದು ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಇನ್ನೂ ಕುಡಿತದ ಚಟಕ್ಕೆ ಬಿದ್ದ ಆ ವ್ಯಕ್ತಿಯನ್ನು ಮದ್ಯವರ್ಜನ ಶಿಬಿರ ಕೇಂದ್ರಕ್ಕೆ ನಿತ್ಯಾನಂದ ಒಳಕಾಡು ಅವರು ಸೇರ್ಪಡೆ ಮಾಡಿಸಿದ್ದಾರೆ. ಇನ್ನಾದರೂ ಆ ವ್ಯಕ್ತಿ ಬದಲಾಗುತ್ತಾನಾ ಎಂದು ಕಾದು ನೋಡಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ