ಕಾಫಿನಾಡಿನಲ್ಲಿ ಗಾಳಿ ಮಳೆ ಅಬ್ಬರ: ರಸ್ತೆಗುರುಳಿದ ಬೃಹತ್ ಮರ - Mahanayaka

ಕಾಫಿನಾಡಿನಲ್ಲಿ ಗಾಳಿ ಮಳೆ ಅಬ್ಬರ: ರಸ್ತೆಗುರುಳಿದ ಬೃಹತ್ ಮರ

kalasa
24/06/2025

ಚಿಕ್ಕಮಗಳೂರು:   ಕಾಫಿನಾಡ ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ–ಮಳೆಗೆ ಬೃಹತ್ ಮರ ಧರೆಗುರುಳಿದೆ. ಕಳಸ ತಾಲೂಕಿನ ಬಸರೀಕಲ್ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದೆ.

ಮರ ಉರುಳಿದ ಪರಿಣಾಮ ಕಳಸ–ಕಾರ್ಕಳ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ರಾಜ್ಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆ ಟ್ರಾಫಿಕ್ ಜಾಮ್  ಉಂಟಾಗಿದೆ.

ಅರಣ್ಯ ಅಧಿಕಾರಿಗಳು ಹಾಗೂ ಕಳಸ ಪೊಲೀಸರು ಮರ ತೆರವು ಕಾರ್ಯಾಚರಣೆ ನಡೆಸಿದರು. ಬೃಹತ್ ಮರ ರಸ್ತೆಗೆ ಬಿದ್ದರೂ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ