ಚಿಕ್ಕಮಗಳೂರು: ಮಳೆ ಅಬ್ಬರ - ಸಿಡಿಲಿಗೆ ಕುರಿಗಾಯಿ ಬಲಿ - Mahanayaka
11:15 PM Wednesday 29 - April 2026

ಚಿಕ್ಕಮಗಳೂರು: ಮಳೆ ಅಬ್ಬರ — ಸಿಡಿಲಿಗೆ ಕುರಿಗಾಯಿ ಬಲಿ

chikkamagaluru
14/05/2025

ಚಿಕ್ಕಮಗಳೂರು: ಜಿಲ್ಲೆ ಕಡೂರು ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಸಿಡಿಲು ಬಡಿದ ಪರಿಣಾಮ ಒಂದೇ ಕುರಿಗಾಯಿ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.

ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (ವಯಸ್ಸು 48) ಎಂಬವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದುರಂತವಾದ ಘಟನೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ