ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ 1 ವಾರಗಳ ಕಾಲ ಭಾರೀ ಮಳೆಯಾಗಲಿದೆ! - Mahanayaka

ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ 1 ವಾರಗಳ ಕಾಲ ಭಾರೀ ಮಳೆಯಾಗಲಿದೆ!

rain
03/07/2025


Provided by

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಆಗುಂಬೆ, ಕದ್ರಾ, ಜೋಯ್ಡಾ, ಗೇರುಸೊಪ್ಪ, ಸಿದ್ದಾಪುರ, ಮೂಡುಬಿದಿರೆ, ಕಾರ್ಕಳ, ಲೋಂಡಾ, ಶೃಂಗೇರಿ, ಕಮ್ಮರಡಿ, ಕೊಪ್ಪ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾ, ಶಿರಾಲಿ, ಯಲ್ಲಾಪುರ, ಬಂಟವಾಳ, ಮಂಕಿ, ಚಿಂಚೋಳಿ, ಹುಮ್ನಾಬಾದ್, ಸೋಮವಾರಪೇಟೆ, ಜಯಪುರ, ಭಾಗಮಂಡಲ,ತ್ಯಾಗರ್ತಿ, ನಾಪೋಕ್ಲು, ಕಳಸ, ಸೇಡಂ, ಮಂಠಾಳ, ಚಿತ್ತಾಪುರ, ಖಾನಾಪುರ, ಕುಮಟಾ, ಉಡುಪಿ, ಕೋಟಾ, ಗೋಕರ್ಣ, ಮುಲ್ಕಿ, ಹಳಿಯಾಳ, ಕಾರವಾರ, ಬೀದರ್, ಕೂಡಲಸಂಗಮ, ವಿರಾಜಪೇಟೆ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಕೊಟ್ಟೂರು, ಹುಂಚದಕಟ್ಟೆ, ಕಂಪ್ಲಿಯಲ್ಲಿ ಮಳೆಯಾಗಿದೆ.  ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ