RCB ಸಂಭ್ರಮಾಚರಣೆ ವೇಳೆ ಪ್ರಾಣ ಕಳೆದುಕೊಂಡವರ ವಿವರ ಇಲ್ಲಿದೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಂಭ್ರಮಾಚರಣೆ ಸಂದರ್ಭದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಇಡೀ ದೇಶವೇ ಮರುಗಿದೆ. ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ವಿವರ ಹೀಗಿದೆ:
ಭೂಮಿಕ್, 20 ವರ್ಷ (ನೆಲಮಂಗಲ), ಸಹನ 19 ವರ್ಷ (ಕೋಲಾರ), ಪೂರ್ಣಚಂದ್, 32 ವರ್ಷ (ಮಂಡ್ಯ), ಚಿನ್ಮಯಿ, 19 ವರ್ಷ, ದಿವ್ಯಾಂಶಿ, 13 ವರ್ಷ, ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ), ದೇವಿ, 29 ವರ್ಷ, ಶಿವಲಿಂಗ್, 17 ವರ್ಷ, ಮನೋಜ್, 33 ವರ್ಷ (ತುಮಕೂರು), ಅಕ್ಷತಾ, (ಮಂಗಳೂರು), ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ.
ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮೊಟಕು: ವಿಧಾನಸೌಧದ ಸಮಾರಂಭ ಮುಗಿಯುತ್ತಿದ್ದಂತೆಯೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ, ದುರಂತ ನಡೆದು ಹೋಗಿದ್ದರಿಂದ ಸಂಭ್ರಮ ಮಾಯವಾಗಿತ್ತು. ಕೇವಲ 15 ನಿಮಿಷಗಳಲ್ಲೇ ಕಾರ್ಯಕ್ರಮ ಮುಗಿಸಲು ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD