ಹಿಮಾಚಲ ಬಿಕ್ಕಟ್ಟು: ಅನರ್ಹತೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ 6 ಬಂಡಾಯ ಕಾಂಗ್ರೆಸ್ ಶಾಸಕರು - Mahanayaka
1:58 PM Saturday 12 - September 2026

ಹಿಮಾಚಲ ಬಿಕ್ಕಟ್ಟು: ಅನರ್ಹತೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ 6 ಬಂಡಾಯ ಕಾಂಗ್ರೆಸ್ ಶಾಸಕರು

29/02/2024

ಪಕ್ಷದ ವಿಪ್ ಉಲ್ಲಂಘಿಸಿದ್ದಕ್ಕಾಗಿ ಮತ್ತು ಸದನದಲ್ಲಿ ಬಜೆಟ್ ಮೇಲಿನ ಮತದಾನದಿಂದ ದೂರ ಉಳಿದಿದ್ದಕ್ಕಾಗಿ ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಗುರುವಾರ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆರು ಶಾಸಕರು ಬಿಜೆಪಿ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ್ದರು. ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಬಂಡಾಯ ಶಾಸಕರು ಹೇಳಿದ್ದಾರೆ.

ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್ಪಾಲ್, ಚೇತನ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೋ ಅವರು ಸದನದ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಅವರು ಧರ್ಮಶಾಲಾ, ಲಾಹೌಲ್ ಮತ್ತು ಸ್ಪಿಟಿ, ಸುಜನ್ಪುರ್, ಬರ್ಸರ್, ಗಾಗ್ರೆಟ್ ಮತ್ತು ಕುಟ್ಲೆಹಾರ್ ವಿಧಾನಸಭಾ ಕ್ಷೇತ್ರಗಳಿಗೆ ಸೇರಿದವರು.

ಪಕ್ಷದ ವಿಪ್ ಉಲ್ಲಂಘಿಸಿದ ಮತ್ತು ಸದನದಲ್ಲಿ ಬಜೆಟ್ ಗೆ ಮತ ಚಲಾಯಿಸದ ಕಾರಣ ಆರು ಶಾಸಕರನ್ನು ಪಕ್ಷಾಂತರ ವಿರೋಧಿ ಕಾಯ್ದೆಯಡಿ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ಗುರುವಾರ ಸಂಜೆ ಅಧಿಸೂಚನೆ ಹೊರಡಿಸಿದ್ದಾರೆ. ಫೆಬ್ರವರಿ 29 ರಿಂದ ಜಾರಿಗೆ ಬರುವಂತೆ ಆರು ಶಾಸಕರು ಹಿಮಾಚಲ ಪ್ರದೇಶ ವಿಧಾನಸಭೆಯ ಸದಸ್ಯರಾಗಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಅನರ್ಹ ಶಾಸಕರಲ್ಲಿ ಒಬ್ಬರಾದ ರಾಜಿಂದರ್ ರಾಣಾ ಪಿಟಿಐಗೆ ತಿಳಿಸಿದ್ದಾರೆ. ಅವರಲ್ಲಿ ಒಬ್ಬರಿಗೆ ಮಾತ್ರ ಫೆಬ್ರವರಿ 27 ರ ರಾತ್ರಿ ವಾಟ್ಸಾಪ್ನಲ್ಲಿ ನೋಟಿಸ್ ಬಂದಿದೆ ಮತ್ತು ಅವರು ಫೆಬ್ರವರಿ 27 ಮತ್ತು 28 ರಂದು ಸದನದಲ್ಲಿ ಹಾಜರಿದ್ದರು ಎಂದು ಅವರು ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler