ಕೂಡಲೇ ಚುನಾವಣೆ ನಡೆಸಿ: ಭಯೋತ್ಪಾದಕರಿಗೆ ತಲೆಬಾಗಬೇಡಿ: ಮೋದಿ ಸರ್ಕಾರಕ್ಕೆ ಒಮರ್ ಅಬ್ದುಲ್ಲಾ ಎಚ್ಚರಿಕೆ

11/07/2024

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸರ್ಕಾರವು ಭಯೋತ್ಪಾದಕರ ಒತ್ತಡಕ್ಕೆ ಮಣಿಯಬಾರದು. ಜಮ್ಮು ಮತ್ತು ಕಾಶ್ಮೀರದಲ್ಲಿ ಬಹುನಿರೀಕ್ಷಿತ ವಿಧಾನಸಭಾ ಚುನಾವಣೆಯನ್ನು ಮತ್ತಷ್ಟು ವಿಳಂಬಗೊಳಿಸಬಾರದು ಎಂದು ಒತ್ತಿ ಹೇಳಿದರು.

“ಪ್ರಸ್ತುತ ಪರಿಸ್ಥಿತಿ 1996 ರಲ್ಲಿದ್ದಷ್ಟು ಭೀಕರವಾಗಿಲ್ಲ. ನಮ್ಮ ಭದ್ರತಾ ಪಡೆಗಳು, ಪೊಲೀಸರು ಮತ್ತು ಇತರ ಸಂಸ್ಥೆಗಳು ಕಥುವಾದಲ್ಲಿ ಕಂಡುಬರುವಂತೆ ಭಯೋತ್ಪಾದಕ ದಾಳಿಗಳನ್ನು ನಿರ್ವಹಿಸಲು ಮತ್ತು ಪ್ರತಿಕ್ರಿಯಿಸಲು ಸಮರ್ಥವಾಗಿವೆ. ಪರಿಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗಿಲ್ಲವಾದರೂ, ಈ ವರ್ಷದ ಕೊನೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸಲು ಸಾಧ್ಯವಾಗದಷ್ಟು ಅಸ್ಥಿರವಾಗಿಲ್ಲ” ಎಂದಿದ್ದಾರೆ.
“ನಾವು ನಮ್ಮ ಭದ್ರತಾ ಪಡೆಗಳ ಮೇಲೆ ನಂಬಿಕೆ ಇಡಬೇಕು.

ಮತ್ತು ನಾವು ಭಯೋತ್ಪಾದಕರಿಗೆ ಪರಮಾಧಿಕಾರ ನೀಡಲು ಬಯಸಿದ್ರೆ ಚುನಾವಣೆಗಳನ್ನು ನಡೆಸಬೇಡಿ. ಕಾಶ್ಮೀರವು ಕೆಟ್ಟ ಪರಿಸ್ಥಿತಿಗಳನ್ನು ಎದುರಿಸಿದೆ. ಆದರೆ ಅದು ಜಮ್ಮು ಮತ್ತು ಕಾಶ್ಮೀರದ ಪ್ರಜಾಪ್ರಭುತ್ವ ಪ್ರಕ್ರಿಯೆಯ ಮೇಲೆ ಎಂದಿಗೂ ಪರಿಣಾಮ ಬೀರಲಿಲ್ಲ” ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version