ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ - Mahanayaka

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ

cfi
08/06/2021


Provided by

ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಲೂರು, ಹೆಜ್ಮಾಡಿ ಮತ್ತು ಮಲ್ಪೆಯಲ್ಲಿ  ಪ್ರತಿಭಟಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಕಾರ್ಯದರ್ಶಿ ಮಸೂದ್ ಮನ್ನಾ, ಉಪಾಧ್ಯಕ್ಷರಾದ ಸಾದಿಕ್ ಶೇಕ್, ಕೋಶಾಧಿಕಾರಿ ಸದಾಫ್ ಮೊಹಮ್ಮದ್, ಸಮಿತಿ ಸದಸ್ಯರಾದ ಸಫ್ವಾನ್, ಅರ್ಫಾಝ್, ನಝಾಥ್, ಆವೆಝ್, ಅಫ್ತಾಬ್ ಮತ್ತು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ