11:19 AM Saturday 12 - September 2026

ಬಿ.ಹೊಸಹಳ್ಳಿ ಗ್ರಾ.ಪಂ. ವಿರುದ್ದ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರ ಧರಣಿ.

mudigere
05/04/2025

ಮೂಡಿಗೆರೆ: ತಾಲ್ಲೂಕು, ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿ.ಡಿ.ಒ ಮತ್ತು ಅಧ್ಯಕ್ಷರ ಜನವಿರೋಧಿ ಸರ್ವಾಧಿಕಾರಿ ಆಡಳಿತ ವಿರೋಧಿಸಿ ಅದೇ ಪಂಚಾಯಿತಿ ಸದಸ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸಿದ ಘಟನೆ ನಡೆಯಿತು.

ಐದು ಸದಸ್ಯರಿರುವ ಗ್ರಾಮ ಪಂಚಾಯಿತಿಯಲ್ಲಿ ಮೂರು ಸದಸ್ಯರು ವಿವಿಧ ಬೇಡಿಕೆಗಳಾದ ವಸತಿ ಮತ್ತು ನಿವೇಶನ ತಯಾರಿಸದಿರುವ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನ ದುರ್ಬಳಕೆ, ಹದಿನೈದನೇ ಹಣಕಾಸು ಯೋಜನೆಯ ನಿಯಮ ಉಲ್ಲಂಘನೆ, ವರ್ಗ–1ರ ಹಣ ದುರುಪಯೋಗ, ನರೇಗಾ ಯೋಜನೆಯಡಿ ಜನರ ಬೇಡಿಕೆ ಮತ್ತು ವಸತಿ ಇರದ ಕಡೆ ರಸ್ತೆ ಬಾಕ್ಸ್ ಚರಂಡಿ, ಈ ಸ್ವತ್ತು ವಿನಲ್ಲಿ ಅವ್ಯವಹಾರ ಹಾಗೂ ಇನ್ನಿತರೆ ಬೇಡಿಕೆಗಳನ್ನಿಟ್ಟು ಸದಸ್ಯರಾದ ಶಿವಪ್ರಸಾದ್ ಬಿ.ಇ., ಸುನೀತ ಬಿ.ಟಿ.ಉಪಾಧ್ಯಕ್ಷರಾದ ನಾಟ್ಯ ರಂಜಿತ್ ಧರಣಿ ನಡೆಸಿದರು.

ಧರಣಿಯಲ್ಲಿ ರವಿಶಂಕರ್, ಬಿ.ಡಿ ರವಿ, ಕೆ.ಪಿ.ರಾಜು, ಸುಧಾಕರ್, ಜಯಕುಮಾರ್, ರಮೇಶ್ ಪೂಜಾರಿ, ಧನಂಜಯ್, ಜಿತೇಂದ್ರ, ಪ್ರಜ್ವಲ್, ಕೇಶವ್, ಸಂತೋಷ್ ಹೊಕ್ಕಳ್ಳಿ ಹಾಗೂ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version