ಶಾಕಿಂಗ್ ನ್ಯೂಸ್: ಸತೀಶ್ ಜಾರಕಿಹೊಳಿ ಬೆಂಬಲಿಗರ ಮೇಲೆ ಗುಂಡಿನ ದಾಳಿ - Mahanayaka

ಶಾಕಿಂಗ್ ನ್ಯೂಸ್: ಸತೀಶ್ ಜಾರಕಿಹೊಳಿ ಬೆಂಬಲಿಗರ ಮೇಲೆ ಗುಂಡಿನ ದಾಳಿ

17/12/2020

ಹುಕ್ಕೇರಿ: ಶಾಸಕ ಸತೀಶ್ ಜಾರಕಿಹೊಳಿ ಆಪ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರಿಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಇಲ್ಲಿನ ಯಮಕನಮರಡಿಯಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಕಿರಣ್, ಭರಮಾ ದೂಪದಾಳೆ ಗುಂಡಿನ ದಾಳಿಗೊಳಗಾದವರಾಗಿದ್ದಾರೆ. ಈ ಪೈಕಿ ಭರಮಾ ದೂಪದಾಳೆ ಗಾಯಗೊಂಡಿದ್ದು, ಕಿರಣ್ ಪ್ರಾಣಾಪಾಯದಿಂದ ಪರಾಗಿದ್ದಾರೆ ಎಂದು ವರದಿಯಾಗಿದೆ.  ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಇಬ್ಬರು ಅಪರಿಚಿತರು ಈ ಗುಂಡಿನ ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳು ಮಾಸ್ಕ್ ಧರಿಸಿ ಬಂದಿದ್ದು, ಸಂತ್ರಸ್ತರು ಇಲ್ಲಿನ ದೇವಸ್ಥಾನದ ಕಟ್ಟೆಯಲ್ಲಿ ಕುಳಿತಿದ್ದ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಗ್ರಾಮಪಂಚಾಯತ್ ಚುನಾವಣೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ