ಹುಲಿ ಉಗುರು, ಆನೆ ದಂತದ ಕಡಗ ಪತ್ತೆ | ಆರೋಪಿಯ ಬಂಧನ
15/12/2020
ಬೆಳಗಾವಿ: ಹುಲಿ ಉಗುರು ಹಾಗೂ ಆನೆಯ ದಂತದಿಂದ ಮಾಡಲಾಗಿದ್ದ ಕಡಗಳನ್ನು ಹೊಂದಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಆನೆಯ ದಂತದಿಂದ ಮಾಡಲಾಗಿರುವ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಲ್ಲಿ ದೂರು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.