11:37 PM Tuesday 8 - September 2026

ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ: ವಿದ್ಯಾರ್ಥಿಗೆ ಶಿಕ್ಷಕರಿಂದ ಥಳಿತ

school
18/03/2022

ತ್ರಿಶೂರ್: ಶಾಲೆಯಲ್ಲಿ ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ ಮಾಡಿದ ಆರೋಪದಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರು ಮಾರಣಾಂತಿಕವಾಗಿ ಥಳಿಸಿರುವ ಆರೋಪ ಕೇಳಿ ಬಂದಿದ್ದು, ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪಾಲಕ್ಕಾಡ್  ಪಂದಲಂಪಾಡಂ ಮೇರಿ ಮಾತಾ ಶಾಲೆಯ ವಿದ್ಯಾರ್ಥಿ ಶ್ರೇಯಸ್ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಸದ್ಯ ತ್ರಿಶ್ಯೂರ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಲೆಯಲ್ಲಿ ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ಗೆಳತಿಯ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲಾಯಿತು. ಈ ವಿಚಾರವಾಗಿ ವಿದ್ಯಾರ್ಥಿಯನ್ನು ಶಿಕ್ಷಕರ ಕೊಠಡಿಗೆ ಕರೆದೊಯ್ದು ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆಯ ಸಂಬಂಧ ಶಿಕ್ಷಕರು, ವಿದ್ಯಾರ್ಥಿಗೆ ಕಿರುಕುಳ ನೀಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಎರಡೂ ಗುಂಪುಗಳ ದೂರಿನ ಮೇರೆಗೆ ವಡಕ್ಕಾಂಚೇರಿ ಇನ್ಸ್ಪೆಕ್ಟರ್ ಮಹೀಂದ್ರ ಸಿಂಹ ಅವರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗಳಿಗೆ ಅಪ್ಪ ಬೇಡ ಎಂದರೆ ಆಸ್ತಿ ಹಕ್ಕು ಇರುವುದಿಲ್ಲ: ಸುಪ್ರೀಂಕೋರ್ಟ್

ಮುಂದಿನ ತಿಂಗಳಿನಲ್ಲಿ  ಅಪ್ಪಳಿಸಲಿದೆ ಈ ವರ್ಷದ ಮೊದಲ ಚಂಡಮಾರುತ

18 ಸರ್ಕಾರಿ ಕಚೇರಿ ಅಧಿಕಾರಿಗಳ ಅಕ್ರಮ ಆಸ್ತಿ ಬಯಲಿಗೆಳೆದ ಎಸಿಬಿ

ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ‘ಜೇಮ್ಸ್’ಗೆ ಅಭಿಮಾನಿಗಳ ಸ್ವಾಗತ ಹೇಗಿತ್ತು?

ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ ಆಹಾರಗಳನ್ನು ಸೇವಿಸಿ

ಇತ್ತೀಚಿನ ಸುದ್ದಿ

mobil chat sitesi
Exit mobile version