4:08 AM Saturday 13 - September 2025

ಮಂತ್ರಾಕ್ಷತೆಯೇ ಮುಖ್ಯವಾದರೆ ಗ್ಯಾರೆಂಟಿಗಳನ್ನು ರದ್ದು ಮಾಡುವುದು ಉತ್ತಮ: ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ

balakrishna
31/01/2024

ಮಾಗಡಿ: ಜನರಿಗೆ ಗ್ಯಾರೆಂಟಿಗಿಂತ ಮಂತ್ರಾಕ್ಷತೆಯೇ ಮುಖ್ಯವಾದರೆ ಗ್ಯಾರೆಂಟಿಗಳನ್ನು ರದ್ದು ಮಾಡುವುದು ಉತ್ತಮ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ.

ಮಾಗಡಿ ತಾಲೂಕಿನ ಶ್ರೀಗಿರಿಪುರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 5 ಗ್ಯಾರೆಂಟಿಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ, ಗ್ಯಾರೆಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು ಎಂದು ನಾನು ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್ ನ ಗ್ಯಾರೆಂಟಿ ಬೇಕೋ ಎಂದು ಜನರೇ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು ಎಂದು ಬಾಲಕೃಷ್ಣ ಹೇಳಿದರು.

ಇತ್ತೀಚಿನ ಸುದ್ದಿ

Exit mobile version